ಬೆಂಗಳೂರು,ಮಾ,30 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಕಾಶ್ಮೀರ್ ಫೈಲ್ಸ್ ಚಲನಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಭೇಟಿ ಮಾಡಿದರು. ರಾಜ್ಯದಲ್ಲಿ ಕಾಶ್ಮೀರ ಫೈಲ್ಸ್ ಚಲನಚಿತ್ರಕ್ಕೆ ಶೇಕಡಾ 100 ರಷ್ಟು ತೆರಿಗೆ ವಿನಾಯತಿ ಘೋಷಣೆ ಮಾಡಿದ ಮುಖ್ಯಮಂತ್ರಿಗಳ ಕ್ರಮಕ್ಕೆ ನಿರ್ದೇಶಕ ಅಭಿಷೇಕ ಅವರು ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಚಲನ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಜೊತೆ ದೂರವಾಣಿಯಲ್ಲಿ ಸಿಎಂ ಮಾತನಾಡಿದರು. ಚಲನಚಿತ್ರದ ಬಗ್ಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.