ಬಳ್ಳಾರಿಯಲ್ಲಿ ದಾಖಲೆ ಇಲ್ಲದ 23 ಲಕ್ಷ ಹಣ, ಚಿನ್ನ, ಬೆಳ್ಳಿ ವಶ

ಬಳ್ಳಾರಿ: ಬಳ್ಳಾರಿ ನಗರದ ಆಭರಣದಂಗಡಿ ಮಾಲೀಕ ಕಮಲೇಶ್ ಜೈನ್ ಎಂಬುವವರ ಮನೆ ಮೇಲೆ ಮಂಗಳವಾರ ರಾತ್ರಿ ದಿಢೀರ್ ದಾಳಿ ನಡೆಸಿರುವ ಪೊಲೀಸರು ಸುಮಾರು 23 ಲಕ್ಷ ಹಣ ಹಾಗೂ ಚಿನ್ನ, ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ‘ಚುನ್ನಿಲಾಲ್ ರಾಕೇಶ್ ಕುಮಾರ್ ಷಾ ಜ್ಯೂವೆಲರ್ಸ್’ ಮಾಲೀಕ ಕಮಲೇಶ್ ಜೈನ್ ಅವರ ಕಂಬಳಿ ಬಜಾರ್‌ನ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಮನೆಯಲ್ಲಿ ತಪಾಸಣೆ ನಡೆಸಿದಾಗ ಸೂಕ್ತ ದಾಖಲೆಗಳು ಇಲ್ಲದ ಅಂದಾಜು 23,00,000 ನಗದು, 450 ಗ್ರಾಂ ಬಂಗಾರದ ವಸ್ತುಗಳು, 13 ಕೆ.ಜಿ. ಬೆಳ್ಳಿ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ಹಣ ಮತ್ತು ಚಿನ್ನ,ಬೆಳ್ಳಿಯ ವಸ್ತುಗಳನ್ನು ಮುಂದಿನ ವಿಚಾರಣೆಗಾಗಿ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ತಿಳಿಸಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top