ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರ

ಯಾದಗಿರಿ: ಮಾರ್ಚ್, 05; ದೋರನಹಳ್ಳಿ ಗ್ರಾಮದಲ್ಲಿ ನಡೆದ ಸಿಲಿಂಡರ್ ದುರಂತ ಪ್ರಕರಣ…! ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ಣ ಸವದಿ ಭೇಟಿ, ಮೃತ ಕುಟುಂಬ ಸದಸ್ಯರಿಗೆ ಸಾಂತ್ವನ, ದೋರನಹಳ್ಳಿ ಸಿಲಿಂಡರ್ ದುರಂತ ಘಟನೆ ಬಗ್ಗೆ ಮಾಹಿತಿ ಪಡೆದ ಸಚಿವ ಬೈರತಿ ಬಸವರಾಜ ಕುಟುಂಬ ಸದಸ್ಯರಿಗೆ ಬಿಜೆಪಿ ಪಕ್ಷದಿಂದ 1 ಲಕ್ಷ ರೂಪಾಯಿ ಆರ್ಥಿಕ ಸಹಾಯ, ಸರಕಾರದಿಂದ ಮೃತ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ಪರಿಹಾರದ ಹಣ ನೀಡಲಾಗುತ್ತದೆ* ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಐದು ಲಕ್ಷ ರೂಪಾಯಿ ಚೆಕ್ ನೀಡುವ ಬಗ್ಗೆ ಚೆಕ್ ಕ್ಲಿಯರ್ ಮಾಡಿದ್ದಾರೆ, ಮೃತ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ, ಸಚಿವ ಬೈರತಿ ಬಸವರಾಜ ಹೇಳಿಕೆ

ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಸುರಪುರ ಶಾಸಕ ರಾಜುಗೌಡ ( ನರಸಿಂಹ ನಾಯಕ), ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಪಾಟೀಲ್, ಶಹಾಪುರ ತಾಲೂಕು ವೈದ್ಯಾಧಿಕಾರಿ ರಮೇಶ ಗುತ್ತೇದಾರ ಇನ್ನಿತರರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top