ಕುಷ್ಟಗಿ:- ಈ ಹಿಂದೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಬಜೆಟ್ ನಲ್ಲಿ ಘೋಷಿಸಿದ್ದ ಕುರಿ ಮತ್ತು ಮೇಕೆಗಳ ಆಕಸ್ಮಿಕ ಮರಣಕ್ಕೆ ಪರಿಹಾರ ಧನ “ಅನುಗ್ರಹ” ಯೋಜನೆಯನ್ನು ಈಗಿನ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿಯವರು ಮುಂದುವರೆಸಿದ್ದಕ್ಕೆ ಕೊಪ್ಪಳ -ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಹಾಲಪ್ಪ ಆಚಾರರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ ಕಂಬಳಿ ಹೊದಿಸಿ ,ಪುಸ್ತಕ ನೀಡಿ ನಾಡಿನ ಸಮಸ್ತ ಕುರಿಗಾಹಿಗಳ ಪರವಾಗಿ ಕುರಿ ಮತ್ತು ಉಣ್ಣೆ ನಿಗಮದ ಅಭಿವೃದ್ದಿ ಇಲಾಖೆ ಅಧ್ಯಕ್ಷರಾದ ಶರಣು ತಳ್ಳಿಕೇರಿ ಇವರು ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಕೊಪ್ಪಳದ ಸಂಸದರಾದ ಶ್ರೀ ಕರಡಿ ಸಂಗಣ್ಣವರು , ಶಾಸಕರಾದ ಶ್ರೀ ಪರಣ್ಣ ಮನವಳ್ಳಿಯವರು, ಶ್ರೀ ಬಸವರಾಜ್ ದಡೆಸುಗೂರವರು ಉಪಸ್ಥಿತರಿದ್ದರು.