ಮಂತ್ರಾಲಯ ಶ್ರೀ ಗುರು ರಾಯರ ಗುರುವೈಭವೋತ್ಸವ ಬೃದಾಂವನಕ್ಕ ವಿಶೇಷ ಶೇಷವಸ್ತ್ರ ಸಮರ್ಪಣೆ

ಮಂತ್ರಾಲಯ ಮಠದಲ್ಲಿ  ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಳೆದ ಆರು ದಿನಗಳಿಂದ ವಿಜೃಂಭಣೆಯಿಂದ ನಡೆಯುತ್ತಿರುವ ಗುರುವೈಭವೋತ್ಸವಕ್ಕೆ ಇಂದು ಸಂಜೆ ತೆರೆ ಬೀಳಲಿದೆ. ಶ್ರೀಮಠದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮ ಜರುಗಿದವು. ರಾಯರ ಬೃಂಧಾವನಕ್ಕೆ ಪಂಚಾಮೃತ ಅಭೀಷೇಕ ನೇರವೇರಿಸಲಾಯಿತು.

ಗುರು ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ ಉತ್ಸವವನ್ನ ಪ್ರತೀವರ್ಷದಂತೆ ಈ ವರ್ಷವೂ ಮಂತ್ರಾಲಯದಲ್ಲಿ ಗುರುವೈಭವೋತ್ಸವವಾಗಿ ಅದ್ದೂರಿಯಿಂದ ಆಚರಿಸಲಾಗುತ್ತದೆ. ‌ಮಾರ್ಚ್ 4 ರಂದು ರಾಯರ 401 ನೇ ಪಟ್ಟಾಭಿಷೇಕ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಇಂದು ರಾಯರ‌ 427 ನೇ ಹುಟ್ಟು ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ.ರಾಯರ ವರ್ಧಂತಿ ಉತ್ಸವ ಹಿನ್ನೆಲೆ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಣೆ ಮಾಡಲಾಯಿತು.

 ನಂತರ ಚೆನೈನ ಶ್ರೀರಾಘವೇಂದ್ರ ನಾದಹಾರ ಸೇವಾ ಟ್ರಸ್ಟ್ ನ 150 ಕಲಾವಿದರಿಂದ ನಾದಹಾರ ಸಮರ್ಪಣ ಸೇವೆ ನಡೆಯಿತು. ಕಳೆದ 18 ವರ್ಷಗಳಿಂದ ನಾದಹಾರ ಸಮರ್ಪಣ ಸೇವೆ ನಡೆಯುತ್ತಿದೆ. ಗುರುವೈಭವೋತ್ಸವ ಹಿನ್ನೆಲೆ ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಿತು.ಉತ್ಸವ ಮೂರ್ತಿ ಪ್ರಹ್ಲಾದ ರಾಜರನ್ನ ಚಿನ್ನದ ರಥದಲ್ಲಿ ಇಟ್ಟು ಮಠದ ಪ್ರಾಂಗಣದ ಸುತ್ತ ಮೆರವಣಿಗೆ ಮಾಡಲಾಯಿತು.ರಥೋತ್ಸವದಲ್ಲಿ  ಸಹಸ್ರಾರು ಭಕ್ತರು ಭಾಗಿಯಾಗಿದ್ದರು. ದೇಶದ ಮೂಲೆ ಮೂಲೆಗಳಿಂದ ಬಂದಿರುವ ಭಕ್ತರು ಶ್ರೀ ಗುರು ರಾಯರ ದರ್ಶನ ಪಡೆದರು.

ಇನ್ನೂ ರಾಯರ ವರ್ಧಂತಿ ಉತ್ಸವ ಹಿನ್ನೆಲೆ  6ದಿನಗಳ ಕಾಲ ಮಠದಲ್ಲಿ  ನಾನಾ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಏರ್ಪಡಿಸಲಾಗಿತ್ತು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದ್ದು ಈ ಮೂಲಕ ಆರು ದಿನಗಳ ಕಾಲ ಆಯೋಜಿಸಲಾಗಿರುವ ಗುರುವೈಭವೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಕಾಣಲಿದೆ.

Leave a Comment

Your email address will not be published. Required fields are marked *

Translate »
Scroll to Top