ಕಂಪ್ಲಿ: ತಾಲೂಕಿನ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕೆ.ಬಿ.ವಾಸುಕುಮಾರ ಅವರು ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ಈ ಮೊದಲು ಇವರು ಬಳ್ಳಾರಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪಿಎಸ್ಐ ಅಗಿ ಕಾರ್ಯನಿರ್ವಹಿಸಿ ಕಂಪ್ಲಿಯಲ್ಲಿಯು ಸೇವೆ ಸಲ್ಲಿಸಿದ್ದರು. ನಂತರ ಪಿಐ ಆಗಿ ಬಡ್ತಿ ಪಡೆದು ಕಡೂರು ಪೊಲೀಸ್ ತರಬೇತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆ, ಕೌಲ್ ಬಜಾರ್ ಪೊಲೀಸ್ ಠಾಣೆಯ ಪಿಐಯಾಗಿ ಕಾರ್ಯನಿರ್ವಹಿಸಿದ್ದರು.
ಇದೀಗ ಮತ್ತೆ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಆಗಿ ವರ್ಗಾವಣೆಯಾಗಿದ್ದು, ಇಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಕಂಪ್ಲಿ ತಾಲೂಕಿನಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಇಲ್ಲ. ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗಿವುದು ಎಂದರು.
ಇದೇ ಸಂದರ್ಭದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಸಿಬ್ಬಂದಿಗಳು, ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ, ಸದಸ್ಯ ಭಟ್ಟ ಪ್ರಸಾದ, ಯುವಮುಖಂಡ ಅಕ್ಕಿ ಜಿಲಾನ್, ಗ್ರಾಪಂ ಸದಸ್ಯ ಬಾಲೇಸಾಬ್, ಊರಿನ ಗಣ್ಯರು ಮುಖಂಡರು ಜನಪ್ರತಿನಿಧಿಗಳು, ಸಾರ್ವಜನಿಕರು ಸನ್ಮಾನಿಸಿ ಗೌರವಿಸಿದರು.