ಡಿಸೇಲ್ ದರ ಏರಿಕೆ ಖಂಡಿಸಿ ಲಾರಿ ಮುಷ್ಕರ ಆರಂಭ

ಲಾರಿ, ಟ್ರಕ್ ಸಂಚಾರ ಸಂಪೂರ್ಣ ಸ್ಥಬ್ಧ

Kannada Nadu
ಡಿಸೇಲ್ ದರ ಏರಿಕೆ ಖಂಡಿಸಿ ಲಾರಿ ಮುಷ್ಕರ ಆರಂಭ

ಬೆಂಗಳೂರು : ಡೀಸೆಲ್ ದರ ಏರಿಕೆ ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಿನಸಿ, ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಸಗಾಟ ಮಾಡುವ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ. ಹೆದ್ದಾರಿ ಹಾಗೂ ನಿಲ್ದಾಣಗಳಲ್ಲಿ ಲಾರಿ ನಿಲ್ಲಿಸಿ ಚಾಲಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಲಾರಿ ಮತ್ತು ಗೂಡ್ಸ್ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ರಸ್ತೆಗಳ ಮೇಲೆ ನೂರಾರು ಲಾರಿಗಳು ನಿಂತಿವೆ.

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಗಿದಂತಾಗಿದೆ ಲಾರಿ ಮಾಲೀಕರ ಸ್ಥಿತಿ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಗಳದಲ್ಲಿ ಲಾರಿ ಮಾಲೀಕರಿಗೆ ಸಮಸ್ಯೆ ಆಗಿದೆ. ಹೀಗಾಗಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ನಿತ್ಯ ನೂರಾರು ಲಾರಿಗಳು ಓಡಾಡುತ್ತಿದ್ದವು. ಇಂದು ಒಂದೇ ಒಂದು ಲಾರಿ‌ ರಸ್ತೆಗಿಳಿಯುವುದಿಲ್ಲ. ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿ ಓಡಿಸುವುದಿಲ್ಲ ಎಂಬುದು ಲಾರಿ ಮಾಲೀಕರ ಆಗ್ರಹವಾಗಿದೆ.

ಬೇಡಿಕೆಗಳೇನು?

ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಬೇಕು.

ರಾಜ್ಯದ ಹೆದ್ದಾರಿ ಟೋಲ್​​​​ಗಳಲ್ಲಿನ ಹಣ ವಸೂಲಿ ತಡೆಯಬೇಕು.

ಗಡಿಗಳಲ್ಲಿ ಆರ್​ಟಿಒ ಚೆಕ್​​ಪೋಸ್ಟ್​ಗಳನ್ನು ತೆರವು ಮಾಡಬೇಕು.

ಎಫ್​ಸಿ ಫಿಟ್ನೆಸ್​ ಶುಲ್ಕ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು.

ಗೂಡ್ಸ್​​​ ವಾಹನಗಳಿಗೆ ಬೆಂಗಳೂರು ಪ್ರವೇಶ ನಿರ್ಬಂಧ ಆದೇಶ ಹಿಂಪಡೆಯಬೇಕು.

ಲಾರಿ ಚಾಲಕರ ಮೇಲಿನ ಹಲ್ಲೆ, ದೌರ್ಜನ್ಯಗಳನ್ನು ತಡೆಯಬೇಕು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";