ರಾಜ್ಯದ ಸರಕಾರ ಕೇವಲ ಕಾಂಗ್ರೆಸ್, ವಿಪಕ್ಷ ಮೈತ್ರಿಕೂಟದ ಹಿತ ಕಾಪಾಡುತ್ತಿದೆ. ಜನಹಿತವನ್ನು ಅದು ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಕಾವೇರಿ ನದಿ ಬಗ್ಗೆ ತಮಿಳುನಾಡಿದ ಸಚಿವರ ಹೇಳಿಕೆಯನ್ನು ಖಂಡಿಸಿದ ಅವರು, ರಾಜ್ಯ ಸರಕಾರವು ಡಿಎಂಕೆ, ಸ್ಟಾಲಿನ್ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಟೀಕಿಸಿದರು.
ಸ್ಟಾಲಿನ್, ಸೋನಿಯಾ ಗಾಂಧಿ ಜೊತೆ ಮಾತನಾಡಲು ಸಿದ್ರಾಮಣ್ಣ, ಡಿ.ಕೆ.ಶಿವಕುಮಾರರಿಗೆ ಧೈರ್ಯವಿಲ್ಲ. ಅವರ ಭಯದಿಂದ ನೀರು ಬಿಡುತ್ತಿದ್ದಾರೆ ಎಂದು ದೂರಿದರು. ಇದನ್ನು ಖಂಡಿಸುವುದಾಗಿ ಹೇಳಿದರು.
ನೀರಿನ ಹಕ್ಕಿಗಾಗಿ, ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಎಲ್ಲ ಜನಪ್ರತಿನಿಧಿಗಳು ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದೇವೆ. ನೀರು ಉಳಿಸುವ ವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
Facebook
Twitter
LinkedIn
WhatsApp
Tumblr
Email
Telegram