ಉಪ್ಪಾರ ಸಮಾಜದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು : ಕಳೆದ 2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಪಿ ಮತ್ತು ದ್ವಿತೀಯ ಪಿ.ಯು.ಸಿ ತರಗತಿಯಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಸಹಸ್ರಾರು ವಿಧ್ಯಾರ್ಥಿಗಳಿಗೆ ಉಪ್ಪಾರ ಸಮಾಜದಿಂದ ಅಕ್ಟೋಬರ್ 1 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಬೆಂಗಳೂರು ಜಿಲ್ಲಾ ಅಧ್ಯಕ್ಷ ಸಿ.ಹೆಚ್.ಕೃಷ್ಣಮೂರ್ತಿ ಉಪ್ಪಾರ್ ತಿಳಿಸಿದ್ದಾರೆ.

 

ಈ ಕುರಿತು ಹೇಳಿಕೆ ನೀಡಿರುವ ಅವರು, ಹುಬ್ಬಳ್ಳಿಯ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ಅಂದು ಉಪ್ಪಾರ ಸಮಾಜದ ಏಕೈಕ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯ ಮಟ್ಟದ ಉಪ್ಪಾರ ಸಮಾಜದ ಹಿರಿಯರು, ರಾಜಕೀಯ ಮುಖಂಡರು, ಮಹಿಳಾ ಮುಖಂಡರು ಮತ್ತು ಯುವ ನೇತಾರರ ಸಮಾಗಮ ಕಾರ್ಯಕ್ರಮ ಇದಾಗಿದ್ದು,  ರಾಜ್ಯದ ವಿವಿಧ ಜಿಲ್ಲೆಗಳ 5 ಸಾವಿರಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮಕ್ಕೆ ಅಗಮಿಸಲಿದ್ದಾರೆ.

 

ಹೆಚ್ಚಿನ ಮಾಹಿತಿಗೆ : 9845143579 ಸಂಪರ್ಕಿಸುವಂತೆ ಕೋರಲಾಗಿದೆ.

Facebook
Twitter
LinkedIn
WhatsApp
Telegram
Tumblr
Email

Leave a Comment

Your email address will not be published. Required fields are marked *

Translate »
Scroll to Top