ಸಮೃದ್ದ ಕನ್ನಡ ನಾಡು ಕಟ್ಟಲು ಯುವ ಜನತೆ ಮುಂದಾಗಬೇಕು – ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಕನ್ನಡ ಅತ್ಯಂತ ಶ್ರೀಮಂತ ಮತ್ತು ಸಿಹಿಯಾದ ಭಾಷೆಯಾಗಿದ್ದು, ಯುವ ಪೀಳಿಗೆ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

 

ಶ್ರೀನಿವಾಸ ನಗರದಲ್ಲಿ ಸಾಮಾಜಿಕ ಕಾರ್ಯಕರ್ತ, ವಿಶ್ವಕರ್ಮ ನಾಡೋಜ ಡಾ. ಬಿ. ಎಂ. ಉಮೇಶ್ ಕುಮಾರ್ ಅವರ ತಂಡ ಆಯೋಜಿಸಿದ್ದ 68 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ನೆಲ, ಜಲ ಸಂರಕ್ಷಣೆಗಾಗಿ ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನವಿದೆ. ಇದನ್ನು ಅರ್ಥಮಾಡಿಕೊಂಡು ಯುವ ಜನತೆ ಕನ್ನಡ ಮನಸುಗಳನ್ನು ಬೆಸೆಯುವ, ಸಮೃದ್ಧ ಕನ್ನಡ ನಾಡು ಕಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ನಾಡಗೀತೆ ಮೊಳಗಿತು. ಕನ್ನಡ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top