ರೈತರ ಪರ ನಿಲುವು ತಳೆದ ಸಿಎಂ ಸಿದ್ದರಾಮಯ್ಯ!

Kannada Nadu
ರೈತರ ಪರ ನಿಲುವು ತಳೆದ ಸಿಎಂ ಸಿದ್ದರಾಮಯ್ಯ!

ರೈತರ ಪರ ನಿಲುವು ತಳೆದ ಸಿಎಂ ಸಿದ್ದರಾಮಯ್ಯ!

ದೇವನಹಳ್ಳಿ ರೈತರ ಹೋರಾಟಕ್ಕೆ ಈ ಮೂಲಕ ಅತಿದೊಡ್ಡ ಜಯ ಸಿಕ್ಕಿದೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ಅನೇಕ ಸಂಘಟನೆಗಳು, ಚಿಂತಕರು, ಸಾಹಿತಿಗಳು ರೈತರ ಹೋರಾಟಕ್ಕೆ ಸಾಥ್‌ ನೀಡಿದ್ದರು ಹಾಗೂ ಸಿಎಂಗೆ ಮನವಿ ಮಾಡಿದ್ದರು.
ರೈತರ ಮೊರೆಗೆ ಮಣಿದ ಸಿಎಂ ಸಿದ್ದರಾಮಯ್ಯ, ದೇವನಹಳ್ಳಿ ಭೂಸ್ವಾಧೀನ ರದ್ದು

Devanahalli Famers Victory: ದೇವನಹಳ್ಳಿಯಲ್ಲಿ ಭೂಸ್ವಾಧೀನ ರದ್ದಿಗೆ ಸಿಎಂ  ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರ, ರೈತರ ಹೋರಾಟಕ್ಕೆ ಜಯ | Bengaluru/Bangalore News  - Read Latest News And Live Updates ...
ಹರೀಶ್‌ ಕೇರ ಹರೀಶ್‌ ಕೇರ

ಬೆಂಗಳೂರು : ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರಕಾರ ಕೊನೆಗೂ ಮಣಿದಿದೆ. ಕೈಗಾರಿಕಾಭಿವೃದ್ಧಿಗಾಗಿ ನಡೆಸಲು ಉದ್ದೇಶಿಸಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈಬಿಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ರಾಜ್ಯ ಸರ್ಕಾರದ ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ.

Section of Devanahalli farmers meets CM, seeks ₹3.5 crore compensation per  acre, jobs for children of land-losers - The Hindu

ದೇವನಹಳ್ಳಿ ರೈತರ ಹೋರಾಟಕ್ಕೆ ಈ ಮೂಲಕ ಅತಿದೊಡ್ಡ ಜಯ ಸಿಕ್ಕಿದೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.

CM Siddaramaiah: ದೇವನಹಳ್ಳಿ ಭೂಸ್ವಾಧೀನ ಸಂಪೂರ್ಣ ಕೈಬಿಟ್ಟಿದ್ದೇವೆ, ಸ್ವ ಇಚ್ಛೆಯಿಂದ  ಕೊಟ್ಟರೆ ಸ್ವಾಧೀನ: ಸಿಎಂ ಸಿದ್ದರಾಮಯ್ಯ - Kannada News | devanahalli land  acquisition aborted only ...

ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ದೇವನಹಳ್ಳಿ ತಾಲ್ಲೂಕು ಚೆನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ಕೆ.ಐ.ಎ.ಡಿ.ಬಿ.ಕೈಗಾರಿಕಾಭಿವೃದ್ದಿ ಹೆಸರಲ್ಲಿ ಸ್ವಾಧೀನಕ್ಕೆ ಪಡೆಯಲು ಅಧಿಸೂಚನೆ ಹೊರಡಿಸಲಾಗಿತ್ತು. ರೈತರು ಇದನ್ನು ವಿರೋಧಿಸಿ 1195 ದಿನಗಳಿಂದ ಹೋರಾಟ ನಡೆಸಿದ್ದರು. ಅನೇಕ ಸಂಘಟನೆಗಳು, ಚಿಂತಕರು, ಸಾಹಿತಿಗಳು ರೈತರಿಗೆ ಸಾಥ್‌ ನೀಡಿದ್ದರು ಹಾಗೂ ಸಿಎಂಗೆ ಮನವಿ ಮಾಡಿದ್ದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";