ನಟ ದರ್ಶನ್ ಪ್ರಕರಣ: ನಟ ಚಿಕ್ಕಣ್ಣಗೂ ನೋಟಿಸ್ ಕೊಡಲಿದ್ದಾರೆ ಪೊಲೀಸರು

ಬೆಂಗಳೂರು: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ರ‍್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ ಹಾಸ್ಯನಟ ಚಿಕ್ಕಣ್ಣಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಅವರಿಗೆ ನೋಟಿಸ್ ಹೋಗಲು ಕಾರಣ ಏನು? 

ನಟ ದರ್ಶನ್ ಶೆಡ್ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್ನಲ್ಲಿ ಪರ‍್ಟಿ ಮಾಡಿದ್ದರು. ಈ ‍ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿ‍ರ್ಮಾಪಕರು ಭಾಗಿಯಾಗಿದ್ದರು‍ಪಾರ್ಟಿ ಯಿಂದ ಎದ್ದು ನಟ ದರ್ಶನ್  ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್ಗೆ. ಪಾರ್ಟಿಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಪರ‍್ಟಿಯಲ್ಲಿ ದರ್ಶನ್ ಜೊತೆ ಭಾಗಿಯಾದ ಹಿನ್ನೆಲೆಯಲ್ಲಿ ಚಿಕ್ಕಣ್ಣಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಅನ್ನಪರ‍್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು (ಜೂನ್ ೧೭) ಸಂಜೆಯೇ ನೋಟಿಸ್ ನೀಡಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ 19 ಮಂದಿ ಬಂಧನ ಆಗಿದೆ. ಈ ಕೇಸ್ನಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನೂ ಅರೆಸ್ಟ್ ಮಾಡಲಾಗುತ್ತಿದೆ. ದರ್ಶನ್ ಅವರು ಇನ್ನೂ ಹಲವು ದಿನ ಜೈಲಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಬಂದೊದಗಿದೆ.

 

ದರ್ಶನ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ‘ಉಪಾಧ್ಯಕ್ಷ ಸಿನಿಮಾ ರಿಲೀಸ್ ಆದಾಗ ದರ್ಶನ್ ಅವರು ಸಿನಿಮಾ ನೋಡಿ ಚಿಕ್ಕಣ್ಣಗೆ ಬೆಂಬಲ ನೀಡಿದ್ದರು. ದರ್ಶನ್ ಅವರ ಅನೇಕ ಪರ‍್ಟಿಗಳಲ್ಲಿ ಚಿಕ್ಕಣ್ಣ ಭಾಗಿ ಆಗಿದ್ದಿದೆ ಎಂದು ವರದಿಯಾಗಿದೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top