ಪ್ರತಿಯೊಂದು ಗ್ರಾಪಂ ಗಳ ಅಭಿವೃದ್ಧಿಗೆ ಒಂದು ಕೋಟಿ ರೂ, ಅನುದಾನ

ಇಂದು ಗಂಗಾವತಿಯ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ನಡೆದ ಗಂಗಾವತಿ ತಾಲೂಕಿನಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಬಲಿತರಾಗಿ ಆಯ್ಕೆಯಾದ 11 ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ, ಸನ್ಮಾನಿಸಲಾಯಿತು. ನಂತರ ಎಲ್ಲರಿಂದ ಸನ್ಮಾನ ಸ್ವೀಕರಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಯಿತು.

ಈ ಸಮಯದಲ್ಲಿ ಮಾತನಾಡಿ  ಗಂಗಾವತಿ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಗೂ 1 ಕೋಟಿ ಹಣವನ್ನು ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಅನುಧಾನ ಒದಗಿಸಲಾಗುವುದು ಎಂದು ತಿಳಿಸಿದೆ.

ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷರಾದ ಮನೋಹರ್ ಗೌಡ ಹೇರೂರು,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ರಾಜೇಶ್ವರಿ,ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಿಯಣ್ಣ ಸಂಗಟಿ,ಗ್ರಾಮೀಣ ಅಧ್ಯಕ್ಷರಾದ ದುರ್ಗಪ್ಪ ಆಗೋಲಿ,ಮಲ್ಲೇಶಪ್ಪ ಗುಂಗೇರಿ,ವೀರೇಶ್ ಬಲಕುಂದಿ,ಯಮನೂರ ಚೌಡ್ಕಿ,ಸಯ್ಯದ್ ಅಲಿ, ಚಂದ್ರು ಹೇರೂರು, ಸಂಗಮೇಶ್ ಬಾದೊಡಗಿ, ಮಂಜುನಾಥ ರೆಡ್ಡಿ, ರಾಜೇಶ್ ರೆಡ್ಡಿ, ಚೆನ್ನವೀರ ಗೌಡರು, ಜಿಲಾನ್ ಪಾಷ, ದಳಪತಿ, ನಾಗರಾಜ್ ಚಳಗೆರಿ, ಶಿವು ಆದೋನಿ, ಇತರ ಮುಖಂಡರು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top