ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್ಪರ‍್ಟ್ ರದ್ದತಿಗು ಕೂಡ ವಿಶೇಷ ತಿನಿಖಾ ದಳ  ಪ್ರಯತ್ನ ನಡೆಸುತ್ತಿದೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಇದಾದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದ್ದರೂ, ಪ್ರಜ್ವಲ್ ರೇವಣ್ಣ ಇನ್ನೂವರೆಗು ವಿಚಾರಣೆಗೆ ಹಾಜರಾಗಿಲ್ಲ.

ಪ್ರಕರಣಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಂಗ್ರಹಿಸಿ ಎಸ್ಐಟಿ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ವಿರುದ್ಧ ಬಂಧನ ವಾರಂಟ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದ್ದರು.

ಪಾಸ್ ಪೋಸ್ ರದ್ದತಿಗೆ ಕೇಂದ್ರಕ್ಕೆ ಪತ್ರ:

ಪ್ರಜ್ವಲ್ ರೇವಣ್ಣ ಸಂಸದರಾಗಿರುವ ಕಾರಣ ತಮ್ಮ ರಾಜತಾಂತ್ರಿಕ ಪಾಸ್‌ಪರ‍್ಟ್ ಬಳಸಿ ವಿದೇಶಕ್ಕೆ ತೆರಳಿದ್ದಾರೆ. ಹೀಗಾಗಿ ಆ ಪಾಸ್ ಪರ‍್ಟ್ ರದ್ದಾದರೆ ಕೂಡಲೇ ಅವರು ಸ್ವದೇಶಕ್ಕೆ ಮರಳಬೇಕಾಗುತ್ತದೆ. ಈಗ ನ್ಯಾಯಾಲಯದ ಬಂಧನ ವಾರಂಟ್ ಆಧರಿಸಿ ಪಾಸ್ ಪರ‍್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್‌ಐಟಿ ಪತ್ರ ಬರೆಯಲಿದೆ.

ಆರ್ಥಿಕವಾಗಿ ಕಟ್ಟಿಹಾಕಲು SIT ಮಾಸ್ಟರ್ ಪ್ಲ್ಯಾನ್:

 

ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ರ‍್ಗಾವಣೆಯಾಗಿದೆ ಎಂದು ಮಾಹಿತಿ ಎಸ್ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ರ‍್ಗಾವಣೆಯಾಗದಂತೆ ತಡೆಯಲು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top