ಚಿರತೆ ದಾಳಿಗೆ ಕುರಿ ಬಲಿ

ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಜಂಬುನಾಥನಹಳ್ಳಿ ಪ್ರದೇಶದ ರಾಯರ ಕೆರೆ ಏರಿಯಾದ ಹೊಲದಲ್ಲಿ ಕುರಿಯ ಮೇಲೆ ದಾಳಿ ಮಾಡಿದ ಚಿರತೆ ಕುರಿಯನ್ನು ಕೊಂದು ಹಾಕಿದೆ. 

ಪ್ರತಿ ನಿತ್ಯ ಈ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವುದನ್ನು ಜನರು ನೋಡಿದ್ದಾರೆ. ಇದರಿಂದ ಜನರು ಹೊಲದಲ್ಲಿ ಕೆಲಸ ಮಾಡಲು ಹೆದರುವ ಪರಿಸ್ಥಿತಿ ನಿರ್ಮಾಣಗೊಂಡಿದೆ. 

ಜಂಬುನಾಥನಹಳ್ಳಿ ಪ್ರದೇಶದಲ್ಲಿ ಒಟ್ಟು ನಾಲ್ಕು ಚಿರತೆಗಳಿರುವ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ರೈತರು ಕೂಡಲೇ ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top