ಸಂತ್ರಸ್ತರ ಬೇಡಿಕೆ ಈಡೇರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿಶೇಷ ಸಭೆ

ಬೆಂಗಳೂರು : ಬಹಳ ವರ್ಷಗಳಿಂದ ಬಾಕಿ ಇರುವ ಸಂತ್ರಸ್ತರ ಕುಟುಂಬಗಳ ಬೇಡಿಕೆಯನ್ನು ಈಡೇರಿಸಲು ಕೈಗೊಂಡ ಅಗತ್ಯ ಕ್ರಮಗಳ ಕುರಿತು ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಪಾಲ್ಗೊಂಡು ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು,

ವಿಶೇಷವಾಗಿ ಸಭೆಯಲ್ಲಿ ಅರಣ್ಯ ಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಜನರ ಜೀವನೋಪಾಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅರಣ್ಯ ವಾಸಿಗಳ ಭೂ ಮಂಜೂರಾತಿ ನೀಡಿ ಅವರಿಗೆ ಮೂಲಭೂತ ಸೌಕರ್ಯ ಮತ್ತು ವಿಶೇಷವಾಗಿ ರೈತರ ಸುಸ್ಥಿರ ಅಭಿವೃದ್ಧಿ ಅಡಿಯಲ್ಲಿ ಶಿವಮೊಗ್ಗ, ಕಾರವಾರ ಚಾಮರಾಜನಗರ, ಕೊಡಗು ಪ್ರದೇಶದಲ್ಲಿ ವನ್ಯ ಪ್ರಾಣಿಗಳ ರಕ್ಷಣೆ, ರೈತರ ಬೆಳೆ ನಷ್ಟ ಕುರಿತು ಸಮಾಲೋಚನೆ ನಡೆಸಲಾಯಿತು.

Facebook
Twitter
LinkedIn
WhatsApp
Telegram
Email

Leave a Comment

Your email address will not be published. Required fields are marked *

Translate »
Scroll to Top