ಕುಷ್ಟಗಿ : ಪಟ್ಟಣದಲ್ಲಿ ತಾಲ್ಲೂಕು ಅತಿಥಿ ಉಪನ್ಯಾಸಕರ ಒಕ್ಕೂಟದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತರಗತಿಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿವರೆಗೆ ಧರಣಿ ಸತ್ಯಾಗ್ರಹ ನೆಡೆಸಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕ ಮಾತನಾಡಿ ಕರ್ನಾಟಕ ರಾಜ್ಯದ 400 ಕ್ಕೂ ಅಧಿಕ ಸರಕಾರಿ ಪ್ರಥಮದರ್ಜೆ ಕಾಲೇಜ್ ಗಳಲ್ಲಿ ಸುಮಾರು ಹದಿನೈದು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕನಿಷ್ಠ ಗೌರವ ಧನ ಪಡೆದು ಸೇವೆ ಮಾಡುತ್ತಿದ್ದೇವೆ ಸರ್ಕಾರವು ನಮ್ಮ ಸೇವೆಯನ್ನು ಪರಿಗಣಿಸಿ ಹಾಗೂ ವಿದ್ಯಾರ್ಹತೆಯನ್ನು ಪರಿಗಣಿಸಿ ನಮ್ಮನ್ನು ಅತಿಥಿ ಉಪನ್ಯಾಸಕರ ಹುದ್ದೆ ಯಿಂದ ಕಾಯಂ ಉಪನ್ಯಾಸಕರ ಎಂದು ಪರಿಗಣಿಸಲು ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದಿಂದ 10-12-2021 ರಿಂದ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತರಗತಿಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟ ಕಾಲದವರೆಗೆ ಧರಣಿ ಸತ್ಯಾಗ್ರಹ ಕೈಗೊಂಡಿದ್ದೇವೆ ಎಂದು ಹೇಳಿದರು .
ಇದೇ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ್ ಅವರಿಗೆ ಸೋಮವಾರದಿಂದ ಚಳಿಗಾಲ ಅಧಿವೇಶನ ನಡೆಯಲಿದ್ದು ಅತಿಥಿ ಉಪನ್ಯಾಸಕರ ಪರವಾಗಿ ದ್ವನಿ ಎತ್ತಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು.