ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ಮನವಿ

ಕಾರಟಗಿ,ಫೆ,21 : ಚಿತ್ರದುರ್ಗ ಜಿಲ್ಲೆಯ ಚೆಳ್ಳಕೇರಿ ತಾಲೂಕಿನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಇವರ ಮೇಲೆ ಹಲ್ಲೆ ಖಂಡಿಸಿ ಇಂದು ಕಾರಟಗಿ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಕಡಿವಾಲ ರವರು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ನರಸಪ್ಪ ಎನ್,ತಾ.ಪಂ ಯೋಜನಾಧಿಕಾರಿ ರಾಘವೇಂದ್ರ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಡಾ.ವೆಂಕಟೇಶ, ಭಾಗ್ಯೇಶ್ವರಿ , ಪ್ರಕಾಶ್ ಸಜ್ಜನರ, ನಾಗರಾಜ್, ಸಾಯಿನಾಥ,ಶರಣಮ್ಮ, ಸೇರಿದಂತೆ ಇನ್ನಿತರರಿದ್ದರು ತಾಲೂಕು ನೌಕರರ ಸಂಘದ ಅಧ್ಯಕ್ಷ ಸರ್ಧಾರ್ ಅಲಿ, ಇತರ ಸೇರಿದಂತೆ ನೌಕರ ಸಂಘದ ಪದಾಧಿಕಾರಿಗಳು ಇತರರಿದ್ದರು.

Leave a Comment

Your email address will not be published. Required fields are marked *

Translate »
Scroll to Top