ಕಾರ್ಯಕರ್ತರಿಗೆ ಕೃತಜ್ಞತಾ ಸಮಾವೇಶ –  ಜನಪರ ಸೇವೆ ಮುಂದುವರೆಸುತ್ತೇನೆ – ರಕ್ಷಾ ರಾಮಯ್ಯ         

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚಿನ ಮತ ಪಡೆಯಲು ಶ್ರಮವಹಿಸಿದ ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕುಗಳ ಪಕ್ಷದ ಕಾರ್ಯಕರ್ತರು  ಮುಖಂಡರಿಗೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಯುವ ಕಾಂಗ್ರೆಸ್ ವ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ  ಕಾರ್ಯಕರ್ತರಿಗೆ “ಕೃತಜ್ಞತಾ ಸಮಾರಂಭ ಏರ್ಪಡಿಸಿದ್ದರು. 

” ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಮಾಜಿ ಸಚಿವ ಕೃಷ್ಣಾರೆಡ್ಡಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. 

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ತಮಗರ ಮತ ನೀಡಿ ಆಶೀರ್ವದಿಸಿದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಹೋರಾಟ ನಿಲ್ಲುವುದಿಲ್ಲ. ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಜನಪರ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇನೆ ಎಂದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top