ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ

ತಿಪಟೂರು : ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಬರ್ಬರ ಹತ್ಯೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಕೋ ಲೇಟ್ ನಾಗರಾಜ್ ಎಂಬುವರನ್ನು ಅದೇ ಗ್ರಾಮದ ಮೃತೆ ಗಂಡನ ಅಕ್ಕನ ಮಗನಾದ ದಿವಾಕರ್ (25) ಎಂಬುವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಘಟನೆ ನಡೆದ ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ ಘಟನೆಯನ್ನು ನೋಡಿದ್ದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ..ಮತ್ತು ಕೆಲ ಸಾರ್ವಜನಿಕರು ಈ ಘಟನೆಯನ್ನು ನೋಡಿದ್ದು, ಕಾಪಾಡಲೆಂದು ಹೋಗುವಾಗ ನಿಮ್ಮನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿ,ಓಡಿ ಹೋಗಿರುತ್ತಾನೆ..ಈ ಘಟನೆ ನಡೆದ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಆಗಮಿಸಿದ್ದು, ಮುಂದಿನ ಕ್ರಮ ಜರುಗಿಸುವ ಈ ನಿಟ್ಟಿನಲ್ಲಿ ಗ್ರಾಮಸ್ಥರು ಕಾಯತೊಡಗಿದ್ದಾರೆ.

Leave a Comment

Your email address will not be published. Required fields are marked *

Translate »
Scroll to Top