Author name: Kannada Nadu

ಕನ್ನಡನಾಡು ಹೆಸರಿನಲ್ಲಿಯೇ ಇರುವಂತೆ ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಯ ಜೊತೆಗೆ ಜನರ ನಾಡಿಮಿಡಿತವಾಗಿರುವ ದೈನಂದಿನ ಪ್ರಾದೇಶಿಕ ಕನ್ನಡ ಪತ್ರಿಕೆ. 1994ರಲ್ಲಿ ಪ್ರಾರಂಭಗೊಂಡು ನಿರಂತರವಾಗಿ ಜನಪರ ಸುದ್ದಿಗಳನ್ನು ನೀಡುತ್ತಾ, ಜನಮಾನಸದಲ್ಲಿ ಮನ್ನಣೆ ಗಳಿಸಿದೆ. ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ, ಜನಪರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತಾ, ಜನರ ಸಮಸ್ಯೆಗಳು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಾ ಬಂದಿದೆ. ಆರಂಭದಲ್ಲಿ ಕಪ್ಪು ಬಿಳುಪು ಬಣ್ಣದಲ್ಲಿ ಮುದ್ರಣಗೊಳ್ಳುತ್ತಾ, ನಂತರದಲ್ಲಿ ವರ್ಣರಂಜಿತವಾಗಿ ಮುದ್ರಣಗೊಂಡು ಜನರ ಮನಸೂರೆಗೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಿಂದಲೇ ಮುದ್ರಣಗೊಂಡು ಪ್ರಕಟಗೊಳ್ಳುತ್ತಿರುವ ಈನಮ್ಮ ಕನ್ನಡನಾಡು ದಿನಪತ್ರಿಕೆ ಬಳ್ಳಾರಿ ಸೇರಿದಂತೆ ಕೊಪ್ಪಳ, ರಾಯಚೂರು, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಹಾಗೂ ಗದಗ ಜಿಲ್ಲೆಯಲ್ಲಿ ಪ್ರಸರಣೆ ಹೊಂದಿದ್ದು ಜನಮನ್ನಣೆಗಳಿಸಿದೆ. ಇದೀಗ ಕಾಲ ಬದಲಾದಂತೆ ಅದಕ್ಕೆ ಹೊಂದಿಕೊಂಡು ನಾವು ಬದಲಾಗಬೇಕಿದೆ. ಅಂತೆಯೇ ಇದೀಗ ಜನರಿಗೆ ಕ್ಷಣಾರ್ಧದಲ್ಲೇ ಸುದ್ದಿಗಳನ್ನು ಓದುವ ತವಕ ಇದ್ದರೆ, ಕೆಲವರಿಗೆ ನೋಡುವ ತವಕ ಇರುತ್ತದೆ. ಈ ನಿಟ್ಟಿನಲ್ಲಿ ನೂತನ ಮೈಲುಗಲ್ಲಾಗಿ ಕನ್ನಡನಾಡು ಹೆಸರಿನಲ್ಲಿ ವೆಬ್‌ಸೈಟ್‌ನ್ನು ಪ್ರಾರಂಭಿಸಲಾಗಿದ್ದು, ಒಮ್ಮೆ ನೀವು ಸಬ್‌ಸ್ಕ್ರೈಬ್ ಆದಲ್ಲಿ ಸುದ್ದಿಗಳು ಕ್ಷಣಾರ್ಧದಲ್ಲೇ ನಿಮ್ಮ ಮೊಬೈಲ್‌ನಲ್ಲಿ ನೋಡಬಹುದಾಗಿದೆ. ಅದೇ ರೀತಿ ಈಗಾಗಲೇ ಕನ್ನಡನಾಡು ಹೆಸರಿನಲ್ಲಿ ಯೂಟ್ಯೂಬ್ ವಾಹಿನಿಯೊಂದು ಚಾಲನೆಯಲ್ಲಿದ್ದು, ಪ್ರತಿನಿತ್ಯ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳೊಂದಿಗೆ, ಪ್ರತಿ ವಾರ ಸಿನಿಮಾ ಸ್ಟೋರಿಗಳು ಸೇರಿದಂತೆ ಮತ್ತಿತರೆ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಒಮ್ಮೆ ಚಾನೆಲ್‌ಗೆ ಭೇಟಿ ಕೊಟ್ಟು, ಸಬ್‌ಸ್ಕ್ರೈಬ್ ಮಾಡಿಕೊಂಡಲ್ಲಿ ವಿನೂತನ ಕಾರ್ಯಕ್ರಮಗಳ ಅಪ್‌ಡೇಟ್‌ಗಳು ಸಿಗಲಿವೆ.

Kannada Nadu

ಯುವ ಜನಾಂಗ ಏಪ್ರಿಲ್ 26 ರಂದು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು – ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ

ಬೆಂಗಳೂರು: ಉತ್ತಮ ಸಮಾಜ ಮತ್ತು ಸರ್ಕಾರವನ್ನು ಆಯ್ಕೆ ಮಾಡಲು ಸಂವಿಧಾನದ ನಮಗೆ ಮತದಾನದ ಹಕ್ಕು ನೀಡಿದ್ದು, ಯುವ ಸಮೂಹ ತಪ್ಪದೇ ಮತದಾನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಕರೆ ನೀಡಿದ್ದಾರೆ.
ಶ್ರೀ ಕೃಷ್ಣದೇವರಾಯ ಶಿಕ್ಷಣ ಟ್ರಸ್ಟ್ ನ ಸರ್.ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಘಟಿಕೋತ್ಸವದಲ್ಲಿ 682 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಉತ್ತಮ ಸರ್ಕಾರ ಆಯ್ಕೆ ಮಾಡಲು ವಿದ್ಯಾರ್ಥಿ ಸಮೂಹ ಮುಂದಾಗಬೇಕು. ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು. ಯಾವುದೇ ಚುನಾವಣೆಯಲ್ಲೂ ಮತದಾನದಿಂದ ದೂರ ಉಳಿಯಬಾರದು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕಾಯುಕ್ತ ಬಲೆಗೆ

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರಯ್ಯ ತುಮಕೂರು ಲೋಕಾಯುಕ್ತ ಬಲೆಗೆ. ಅಡಿಕೆ ಪಟ್ಟೆ ತಟ್ಟೆ ತಯಾರಿಸುವ ಪ್ಯಾಕ್ಟರಿ ಪರವಾನಗಿಯ ಕೆಲಸ ಮಾಡಿಕೊಡಲು 20 ಸಾವಿರ ಹಣದ ಬೇಡಿಕೆ ಇಟ್ಟಿದ್ದ ಅದ್ಯಕ್ಷ ಹಾಗೂ ಪಿಡಿಒ.ಪಿಡಿಒ ಹಾಗೂ ಅದ್ಯಕ್ಷ ಇಬ್ಬರು ಲೋಕಾಯುಕ್ತ ಬಲೆಗೆ. ಪಿಡಿಒ ಕಿಶೋರ್ ಲಾಲ್ ಸಿಂಗ್ ಹಾಗೂ ಅದ್ಯಕ್ಷ ಚಂದ್ರಶೇಖರಯ್ಯ ಎಲೆ ರಾಂಪುರ ಗ್ರಾಮದ ಆರ್ ನಾಗೇಶ್ ರವರ ಬಳಿಕೆಲಸ ಮಾಡಲು ಇಪ್ಪತ್ತು ಸಾವಿರ ಹಣ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಎಂಬಿಬಿಎಸ್ ಪದವಿ ಪಡೆಯದ ದಂತ ವೈದರನ್ನು ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ

ಬೆಂಗಳೂರು: ಎಂಬಿಬಿಎಸ್ ಪದವಿ ಪಡೆಯದ ಹಿನ್ನೆಲೆಯಲ್ಲಿ ದಂತ ವೈದ್ಯರನ್ನು ರಾಜ್ಯ ರ್ಕಾ ರಿ ಸೇವೆಗಳ ಅಡಿ ಬರುವ ತಾಲ್ಲೂಕು ಆರೋಗ್ಯ ಅಧಿಕಾರಿ ಹುದ್ದೆಗೆ ನಿಯೋಜಿಸುವಂತಿಲ್ಲ ಎಂದು ಹೈಕರ್ಟ್ಿನ ಧಾರವಾಡ ಪೀಠ ಆದೇಶಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕು ಆರೋಗ್ಯ ಕಚೇರಿಯ ವೈದ್ಯಾಧಿಕಾರಿಯಾಗಿ ತಮ್ಮನ್ನು ನಿಯೋಜಿಸಿದ್ದ ಆದೇಶ ಹಿಂಪಡೆದ ರ್ಕಾ ರದ ಕ್ರಮ ಪ್ರಶ್ನಿಸಿ ಹಿರಿಯ ದಂತ ವೈದ್ಯಾಧಿಕಾರಿ ಡಾ.ವಿದ್ಯಾವತಿ ಯು. ಪಾಟೀಲ್ ಸಲ್ಲಿಸಿದ್ದ ರ್ಜಿ ಯನ್ನು ನ್ಯಾಯಮರ್ತಿದಗಳಾದ ಎಂ ಐ ಅರುಣ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠ ವಜಾ ಮಾಡಿದೆ.

‘ನಾವು ಪಾಕಿಸ್ತಾನದಲ್ಲಿದ್ದೇವೆಯೇ?’; ಕಾರ್ ಅಡ್ಡ ಹಾಕಿ ಹರ್ಷಿಕಾಗೆ ಕಿರುಕುಳ; ಪೊಲೀಸರು ಸಹಾಯಕ್ಕೆ ಬಂದಿಲ್ಲ ಎಂದ ನಟಿ

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ತಮಗಾದ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ‘ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ’ ಎಂದು ಅವರು ಪೋಸ್ಟ್ ಆರಂಭಿಸಿದ್ದಾರೆ. ಅವರು ಬರೆದ ಸೋಶಿಯಲ್ ಮೀಡಿಯಾ ಪೋಸ್ಟ್ ವಿವರ ಇಲ್ಲಿದೆ.

ಗದಗ: ನಗರ ಸಭೆ ಉಪಾಧ್ಯಕ್ಷೆಯ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಮಲಗಿದ್ದಲ್ಲೇ ಭೀಕರ ಕೊಲೆ!

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ರ್ಮಿ ಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್​ನಲ್ಲಿ ಕಾಂಗ್ರೆಸ್ ಕರ‍್ಪೋರೇಟರ್ ನಿರಂಜನ್ ಪುತ್ರಿಯ ಭೀಕರ ಕೊಲೆ, ಆರೋಪಿ ಫಯಾಜ್ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ೨೪ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಯುವಕನರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕರ್ಪೊರರೇಟರ್ ಪುತ್ರಿ ನಿರಂಜನ ಹಿರೇಮಠ ಪುತ್ರಿ ಎಂದು ತಿಳಿದುಬಂದಿದೆ.

ಕೋಮು ರಾಜಕಾರಣ ನಮ್ಮದಲ್ಲ  :   ಧ್ವನಿ ಎತ್ತಿದ  ಬ್ರಾಹ್ಮಣ ಸಮುದಾಯ 

ಮಂಗಳೂರು : ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ , ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ ವಿರುದ್ಧ ಧ್ವನಿಯೆತ್ತಿದ್ದಾರೆ. ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ ಇತ್ತೀಚಿನ ವರ್ಷಗಳಿಂದ ಬಿಜೆಪಿ ಬ್ರಾಹ್ಮಣ ನಾಯಕತ್ವಕ್ಕೆ ಮಣೆ ಹಾಕಿದ್ದು ಹೆಚ್ಚು . ಇದು ಬ್ರಾಹ್ಮಣ ಸಮುದಾಯ ಬಿಜೆಪಿಯತ್ತ ವಾಲಲು ಮುಖ್ಯ ಕಾರಣವಾಗಿತ್ತು.

ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ

ಬಳ್ಳಾರಿ: ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಸೂಚಕರು ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ರಾಜ್ಯ ಎಸ್ ಟಿ ಮೋರ್ಚಾದ ಅಧ್ಯಕ್ಷ ಬಂಗಾರು ಹನುಮಂತು, ವಿಜಯನಗರ ಜಿಲ್ಲೆಯ ಕಾರ್ಯದರ್ಶಿ ರಾಮಣ್ಣ, ವಿಜಯನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನ ಗೌಡ ಅವರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ಭ್ರಮೆ: ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ: ಸಿ.ಎಂ

ಚಿಕ್ಕಬಳ್ಳಾಪುರ (ಬಾಗೇಪಲ್ಲಿ) 18: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

Translate »
Scroll to Top