Author name: Kannada Nadu

ಕನ್ನಡನಾಡು ಹೆಸರಿನಲ್ಲಿಯೇ ಇರುವಂತೆ ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಯ ಜೊತೆಗೆ ಜನರ ನಾಡಿಮಿಡಿತವಾಗಿರುವ ದೈನಂದಿನ ಪ್ರಾದೇಶಿಕ ಕನ್ನಡ ಪತ್ರಿಕೆ. 1994ರಲ್ಲಿ ಪ್ರಾರಂಭಗೊಂಡು ನಿರಂತರವಾಗಿ ಜನಪರ ಸುದ್ದಿಗಳನ್ನು ನೀಡುತ್ತಾ, ಜನಮಾನಸದಲ್ಲಿ ಮನ್ನಣೆ ಗಳಿಸಿದೆ. ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ, ಜನಪರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತಾ, ಜನರ ಸಮಸ್ಯೆಗಳು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಾ ಬಂದಿದೆ. ಆರಂಭದಲ್ಲಿ ಕಪ್ಪು ಬಿಳುಪು ಬಣ್ಣದಲ್ಲಿ ಮುದ್ರಣಗೊಳ್ಳುತ್ತಾ, ನಂತರದಲ್ಲಿ ವರ್ಣರಂಜಿತವಾಗಿ ಮುದ್ರಣಗೊಂಡು ಜನರ ಮನಸೂರೆಗೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಿಂದಲೇ ಮುದ್ರಣಗೊಂಡು ಪ್ರಕಟಗೊಳ್ಳುತ್ತಿರುವ ಈನಮ್ಮ ಕನ್ನಡನಾಡು ದಿನಪತ್ರಿಕೆ ಬಳ್ಳಾರಿ ಸೇರಿದಂತೆ ಕೊಪ್ಪಳ, ರಾಯಚೂರು, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಹಾಗೂ ಗದಗ ಜಿಲ್ಲೆಯಲ್ಲಿ ಪ್ರಸರಣೆ ಹೊಂದಿದ್ದು ಜನಮನ್ನಣೆಗಳಿಸಿದೆ. ಇದೀಗ ಕಾಲ ಬದಲಾದಂತೆ ಅದಕ್ಕೆ ಹೊಂದಿಕೊಂಡು ನಾವು ಬದಲಾಗಬೇಕಿದೆ. ಅಂತೆಯೇ ಇದೀಗ ಜನರಿಗೆ ಕ್ಷಣಾರ್ಧದಲ್ಲೇ ಸುದ್ದಿಗಳನ್ನು ಓದುವ ತವಕ ಇದ್ದರೆ, ಕೆಲವರಿಗೆ ನೋಡುವ ತವಕ ಇರುತ್ತದೆ. ಈ ನಿಟ್ಟಿನಲ್ಲಿ ನೂತನ ಮೈಲುಗಲ್ಲಾಗಿ ಕನ್ನಡನಾಡು ಹೆಸರಿನಲ್ಲಿ ವೆಬ್‌ಸೈಟ್‌ನ್ನು ಪ್ರಾರಂಭಿಸಲಾಗಿದ್ದು, ಒಮ್ಮೆ ನೀವು ಸಬ್‌ಸ್ಕ್ರೈಬ್ ಆದಲ್ಲಿ ಸುದ್ದಿಗಳು ಕ್ಷಣಾರ್ಧದಲ್ಲೇ ನಿಮ್ಮ ಮೊಬೈಲ್‌ನಲ್ಲಿ ನೋಡಬಹುದಾಗಿದೆ. ಅದೇ ರೀತಿ ಈಗಾಗಲೇ ಕನ್ನಡನಾಡು ಹೆಸರಿನಲ್ಲಿ ಯೂಟ್ಯೂಬ್ ವಾಹಿನಿಯೊಂದು ಚಾಲನೆಯಲ್ಲಿದ್ದು, ಪ್ರತಿನಿತ್ಯ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳೊಂದಿಗೆ, ಪ್ರತಿ ವಾರ ಸಿನಿಮಾ ಸ್ಟೋರಿಗಳು ಸೇರಿದಂತೆ ಮತ್ತಿತರೆ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಒಮ್ಮೆ ಚಾನೆಲ್‌ಗೆ ಭೇಟಿ ಕೊಟ್ಟು, ಸಬ್‌ಸ್ಕ್ರೈಬ್ ಮಾಡಿಕೊಂಡಲ್ಲಿ ವಿನೂತನ ಕಾರ್ಯಕ್ರಮಗಳ ಅಪ್‌ಡೇಟ್‌ಗಳು ಸಿಗಲಿವೆ.

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ನಾಗೇಂದ್ರ

ಚಾಮರಾಜನಗರ : ಸಚಿವರಾದ ಬಿ ನಾಗೇಂದ್ರ ಅವರು ಚಾಮರಾಜನಗರ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸ್ಥಿತಿಗತಿಗಳನ್ನು ವಿಚಾರಿಸಿ ಅಪಘಾತದ ವಿವರ ಪಡೆದರು.

ಮೃತ ಕುಟುಂಬಸ್ಥರಿಗೆ ಶ್ರೀರಾಮುಲು ಸಾಂತ್ವನ

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮಕ್ಕೆ ತೆರಳಿ ಅಪಘಾತದಲ್ಲಿ ಮೃತಪಟ್ಟವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಮತ್ತು ಹಿರಿಯರಿಗೆ ಸಾಂತ್ವಾನ ಹೇಳಲಾಯಿತು. ಸಾವಿನ ದುಃಖ ಭರಿಸುವ ಶಕ್ತಿ ಆ ಕುಟುಂಬಕ್ಕೆ ದೇವರು ನೀಡಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಪ್ರಾರ್ಥಿಸಿದರು.

ಬಿಪಿಎಲ್ ಕಾರ್ಡ್: ಜೂ.1 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಆದ್ಯತಾ ಕುಟುಂಬಗಳ (ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್) ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ.

ಭೀಕರ ರಸ್ತೆ ಅಪಘಾತ: 10 ಜನ ಸಾವು

ಮೈಸೂರು: ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ ಸುಮಾರು 10 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ನಡೆದಿದೆ.

ಘಮ ಘಮಿಸಿದ ವೆರೈಟಿ ಮಾವು, ಹಲಸು

ರಾಜ್ಯದಲ್ಲಿ ಮಾವು ಹಾಗೂ ಹಲಸು ಹಣ್ಣಿನ ಋತುಮಾನ ಆರಂಭವಾಗಿದ್ದು, ಈಗ ಹಣ್ಣಿನ ಸುಗ್ಗಿ ನಡೆಯುತ್ತಿದೆ.

ವರ್ಷಕ್ಕೊಮ್ಮೆ ಬೆಳೆಯುವ ಹಣ್ಣುಗಳ ರಾಜ ಮಾವಿನ ಹಣ್ಣನ್ನು ಕಡಿಮೆ ಬೆಲೆಗೆ ಖರೀದಿಸಿ ತಿನ್ನಲು ಮಾವು ಮೇಳವನ್ನೇ ಆಯೋಜನೆ.

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು IPL ಫೈನಲ್ || ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗಲಿದ್ದಾರೆ ಚಾಂಪಿಯನ್..?

ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಇಂದು ಸೋವವಾರಕ್ಕೆ ಮುಂದೂಡಲಾಗಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು.

ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲಿಯೇ 6 ಮಂದಿ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡಿದೆ.

Translate »
Scroll to Top