Author name: Kannada Nadu

ಕನ್ನಡನಾಡು ಹೆಸರಿನಲ್ಲಿಯೇ ಇರುವಂತೆ ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಯ ಜೊತೆಗೆ ಜನರ ನಾಡಿಮಿಡಿತವಾಗಿರುವ ದೈನಂದಿನ ಪ್ರಾದೇಶಿಕ ಕನ್ನಡ ಪತ್ರಿಕೆ. 1994ರಲ್ಲಿ ಪ್ರಾರಂಭಗೊಂಡು ನಿರಂತರವಾಗಿ ಜನಪರ ಸುದ್ದಿಗಳನ್ನು ನೀಡುತ್ತಾ, ಜನಮಾನಸದಲ್ಲಿ ಮನ್ನಣೆ ಗಳಿಸಿದೆ. ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ, ಜನಪರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರುತ್ತಾ, ಜನರ ಸಮಸ್ಯೆಗಳು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯುತ್ತಾ ಬಂದಿದೆ. ಆರಂಭದಲ್ಲಿ ಕಪ್ಪು ಬಿಳುಪು ಬಣ್ಣದಲ್ಲಿ ಮುದ್ರಣಗೊಳ್ಳುತ್ತಾ, ನಂತರದಲ್ಲಿ ವರ್ಣರಂಜಿತವಾಗಿ ಮುದ್ರಣಗೊಂಡು ಜನರ ಮನಸೂರೆಗೊಳ್ಳುತ್ತಿದೆ. ಬಳ್ಳಾರಿ ಜಿಲ್ಲೆಯಿಂದಲೇ ಮುದ್ರಣಗೊಂಡು ಪ್ರಕಟಗೊಳ್ಳುತ್ತಿರುವ ಈನಮ್ಮ ಕನ್ನಡನಾಡು ದಿನಪತ್ರಿಕೆ ಬಳ್ಳಾರಿ ಸೇರಿದಂತೆ ಕೊಪ್ಪಳ, ರಾಯಚೂರು, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಹಾಗೂ ಗದಗ ಜಿಲ್ಲೆಯಲ್ಲಿ ಪ್ರಸರಣೆ ಹೊಂದಿದ್ದು ಜನಮನ್ನಣೆಗಳಿಸಿದೆ. ಇದೀಗ ಕಾಲ ಬದಲಾದಂತೆ ಅದಕ್ಕೆ ಹೊಂದಿಕೊಂಡು ನಾವು ಬದಲಾಗಬೇಕಿದೆ. ಅಂತೆಯೇ ಇದೀಗ ಜನರಿಗೆ ಕ್ಷಣಾರ್ಧದಲ್ಲೇ ಸುದ್ದಿಗಳನ್ನು ಓದುವ ತವಕ ಇದ್ದರೆ, ಕೆಲವರಿಗೆ ನೋಡುವ ತವಕ ಇರುತ್ತದೆ. ಈ ನಿಟ್ಟಿನಲ್ಲಿ ನೂತನ ಮೈಲುಗಲ್ಲಾಗಿ ಕನ್ನಡನಾಡು ಹೆಸರಿನಲ್ಲಿ ವೆಬ್‌ಸೈಟ್‌ನ್ನು ಪ್ರಾರಂಭಿಸಲಾಗಿದ್ದು, ಒಮ್ಮೆ ನೀವು ಸಬ್‌ಸ್ಕ್ರೈಬ್ ಆದಲ್ಲಿ ಸುದ್ದಿಗಳು ಕ್ಷಣಾರ್ಧದಲ್ಲೇ ನಿಮ್ಮ ಮೊಬೈಲ್‌ನಲ್ಲಿ ನೋಡಬಹುದಾಗಿದೆ. ಅದೇ ರೀತಿ ಈಗಾಗಲೇ ಕನ್ನಡನಾಡು ಹೆಸರಿನಲ್ಲಿ ಯೂಟ್ಯೂಬ್ ವಾಹಿನಿಯೊಂದು ಚಾಲನೆಯಲ್ಲಿದ್ದು, ಪ್ರತಿನಿತ್ಯ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಸುದ್ದಿಗಳೊಂದಿಗೆ, ಪ್ರತಿ ವಾರ ಸಿನಿಮಾ ಸ್ಟೋರಿಗಳು ಸೇರಿದಂತೆ ಮತ್ತಿತರೆ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಒಮ್ಮೆ ಚಾನೆಲ್‌ಗೆ ಭೇಟಿ ಕೊಟ್ಟು, ಸಬ್‌ಸ್ಕ್ರೈಬ್ ಮಾಡಿಕೊಂಡಲ್ಲಿ ವಿನೂತನ ಕಾರ್ಯಕ್ರಮಗಳ ಅಪ್‌ಡೇಟ್‌ಗಳು ಸಿಗಲಿವೆ.

Kannada Nadu

ಸಹಕಾರ ಕ್ಷೇತ್ರದಲ್ಲಿ ಯುವ ಸಮೂಹ ತೊಡಗಿಕೊಳ್ಳಬೇಕು : ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಯುವ ಸಮೂಹ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಮೋದಿಜೀ ಅವರ ಆಡಳಿತಕ್ಕೆ ಜನಮೆಚ್ಚುಗೆ- ಆರ್.ಅಶೋಕ್

ಬೆಂಗಳೂರು: ನರೇಂದ್ರ ಮೋದಿಜಿ ಅವರ ಆಡಳಿತವನ್ನು ಜನರು ಮೆಚ್ಚಿದ್ದಾರೆ. ಇದರ ಪರಿಣಾಮವಾಗಿ 3 ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು.

4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬ್ಯಾಂಕ್ ಗಳ ಹಗರಣ ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ

ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು CBI ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಲೋಕನಾಯಕ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದ ಸಿಎಂ

ಬೀದರ್ : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ “ಲೋಕನಾಯಕ” ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು.

ಕಾಡುಮಲ್ಲೇಶ್ವರಂನಲ್ಲಿ ಮೂರು ದಿನಗಳ ವೈಭವದ ಕಡಲೆಕಾಯಿ ಪರಿಷೆಗೆ ಚಾಲನೆ

ಬೆಂಗಳೂರು : ಐತಿಹಾಸಿ ತಾಣ ಕಾಡುಮಲ್ಲೇಶ್ವರಂನಲ್ಲಿ ಮೂರು ದಿನಗಳ ಕಡಲೆಕಾಯಿ ಪರಿಷೆಗೆ ವೈಭವದ ಚಾಲನೆ ದೊರೆಯಿತು. 300 ಕ್ಕೂ ಅಧಿಕ ಮಳಿಗೆಗಳಲ್ಲಿ ಕಡಲೆಕಾಯಿ ಮಾರಾಟ ನಡೆಯುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳು, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶದಿಂದ ರೈತರು ತಾವು ಬೆಳೆದ ಕಡಲೆ ಕಾಯಿಯನ್ನು ತಂದಿದ್ದಾರೆ. 20 ಅಡಿ ಉದ್ಜ ಮತ್ತು 20 ಅಡಿ ಅಗಲದ ನಂದಿ(ಬಸವಣ್ಣ)ಯನ್ನು 800ಕೆ.ಜಿ.ಕಡಲೆಕಾಯಿಯಿಂದ ಅಲಂಕರಿಸಲಾಗಿದೆ.

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ

ಮಂಗಳೂರು : ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಜ್ಯದಲ್ಲೇ ಮೊದಲ ಬಾರಿಗೆ ರೈತರಿಗೆ ಸಾಗುವಳಿ ಚೀಟಿ ಜೊತೆಗೆ ಪಹಣಿ ನೀಡಿದ ಹೆಗ್ಗಳಿಕೆ ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸಲ್ಲುತ್ತದೆ

ಬೆಂಗಳೂರು : ಯುವ ನಾಯಕ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರ ಜನಪರ ಕಾರ್ಯಕ್ರಮ ಮಾದರಿಯಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದ್ದಾರೆ.

Translate »
Scroll to Top