ಹತ್ತು ಸಾವಿರ ವರ್ಷದ ಹಳೆಯ ತ್ರಿಶೂಲ, 3 ಸಾವಿರ ವರ್ಷದ ವಜ್ರಾಯುಧ ಮೊದಲ ಬಾರಿಗೆ ಭಾರತೀಯರ ಮುಂದೆ ಅನಾವರಣ
ಬೆಂಗಳೂರು: ಸಾವಿರ ವರ್ಷಗಳ ಹಳೆಯದಾದ ಶಿವನ ತ್ರಿಶೂಲ ಮತ್ತು 3 ಸಾವಿರ ವರ್ಷಗಳ ಪುರಾತನ ಇಂಧ್ರನ ವಜ್ರಾ [ವಜ್ರಾಯುಧ] ಪತ್ತೆಯಾಗಿದೆ. ಫಿಲಿಫೈನ್ಸ್ ದೇಶದಲ್ಲಿ 2015 ರಲ್ಲಿ ಗಣಿಗಾರಿಕೆ ಮಾಡುವಾಗ ಭೂ ಗರ್ಭದಲ್ಲಿ ಐತಿಹಾಸಿಕ, ಸಾಂಸ್ಕತಿಕ ಮತ್ತು ಕಲಾತ್ಮಕ ಮೌಲ್ಯವುಳ್ಳ ಅತ್ಯಂತ ಅಪರೂಪದ, ಅಮೂಲ್ಯ ಮತ್ತು ಭಾರತೀಯ ಪರಂಪರೆಯ ಈ ವಸ್ತುಗಳು ಗಣಿ ಉದ್ಯಮಿ, ಸಂಶೋಧಕ ಸಯ್ಯದ್ ಸಮೀರ್ ಹುಸೇನ್ ಅವರಿಗೆ ದೊರೆತಿದ್ದು, ಇವು ದೈವಿಕ ಸ್ವರೂಪದ ಮೌಲ್ಯಗಳನ್ನು ಒಳಗೊಂಡಿವೆ.
ಕಾಲೇಜಿನ ಪ್ರಾಂಶುಪಾಲರಿಂದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ
ಬಳ್ಳಾರಿ: ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಉಪನ್ಯಾಸಕಿಯೊಬ್ಬರಿಗೆ ಕಾಲೇಜಿನ ಪ್ರಾಚಾರ್ಯರು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ, ಉಪನ್ಯಾಸಕಿಯು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಿವೃತ್ತಿಯ ಅಂಚಿನಲ್ಲಿರುವ ಪ್ರಾಚಾರ್ಯರು, ಸದರಿ ಉಪನ್ಯಾಸಕಿಯ ಜೊತೆ ಅಸಭ್ಯವಾಗಿ ನಡೆದು ಕೊಂಡಿದ್ದಾರೆಂದೂ, ಆಗಾಗ್ಗೆ ಅನುಚಿತವಾಗಿ ವರ್ತಿಸುತ್ತಿದ್ದರೆಂದೂ ಹೇಳಲಾಗಿದೆ. ನಗರದ ಎಎಸ್ಎಂ ಮಹಿಳಾ ಕಾಲೇಜಿನ ಪ್ರಾಚಾರ್ಯರಾಗಿದ್ದ ಶರಣಪ್ಪ ಅವರ ವಿರುದ್ಧ ಅದೇ ಕಾಲೇಕಿನ ಉಪನ್ಯಾಸಕಿಯೋರ್ವರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈಗ್ಗೆ ಕೆಲ …
ಕಾಲೇಜಿನ ಪ್ರಾಂಶುಪಾಲರಿಂದ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ Read More »
ಸುಳ್ಳು ಪ್ರಚಾರದಲ್ಲಿ ಬಿಜೆಪಿಗರು ನಿಸ್ಸೀಮರು: ಸಚಿವ ಬಿ.ನಾಗೇಂದ್ರ
ಬೆಂಗಳೂರು : ಸುಳ್ಳು ಪ್ರಚಾರ ಮಾಡುವುದರಲ್ಲಿ, ಸಣ್ಣದನ್ನು ದೊಡ್ಡದಾಗಿ ಬಿಂಬಿಸುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಯುವಜನ ಸೇವೆ ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.
‘ಕಮಸಂ’ ಇಲಾಖೆಯಲ್ಲಿ ಅಕ್ರಮಗಳ ತನಿಖೆಗೆ ಆಗ್ರಹ
ಬಳ್ಳಾರಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕಛೇರಿಗಳಲ್ಲಿ ನಡೆದಿರುವ ಅವ್ಯವಹಾರ-ಅಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಚಿವರು ಸಮಗ್ರ ತನಿಖೆ ನಡೆಸುವಂತೆ ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆಯು ಆಗ್ರಹಪಡಿಸಿದೆ.
ಗ್ಯಾರೆಂಟಿ ಜಾರಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್-ಉಗ್ರಪ್ಪ
ಬಳ್ಳಾರಿ : ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವ ನೀಡಿದ ಭರವಸೆಯಂತೆ, ಅಧಿಕಾರಕ್ಕೆ ಬಂದ ಕೂಡಲೇ ಮೊಟ್ಟಮೊದಲ ಸಚಿವ ಸಂಪುಟ ಸಭೆಯಲ್ಲಿಯೇ 5 ಗ್ಯಾರೆಂಟಿಗಳ ಈಡೇರಿಕೆಗೆ ಒಪ್ಪಿಗೆ ನೀಡಿ, ಅದರಂತೆಯೇ ಅವುಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದ್ದು, ನುಡಿದಂತೆಯೇ ನಡೆದು ತೋರಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.
ರೈಲ್ವೆ ಸಚಿವರ ರಾಜೀನಾಮೆಗೆ ಆಗ್ರಹಿಸುವುದು ಸರಿಯಲ್ಲ: ಹೆಚ್ಡಿಡಿ
ಬೆಂಗಳೂರು: ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಬಳಿಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
07.06.2023 – ಇಂದಿನ ರಾಶಿ ಫಲ ಹೇಗಿದೆ ನೋಡಿ.
ಮೇಷ ರಾಶಿ ವಸ್ತು ಮತ್ತು ವಾಹನಗಳನ್ನು ಖರೀದಿಸುತ್ತೀರಿ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಮಕ್ಕಳ ವಿಷಯದಲ್ಲಿ ಶುಭ ಸುದ್ದಿ ಕೇಳುತ್ತೀರಿ. ವೃತ್ತಿಪರ ಕೆಲಸಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಬಾಲ್ಯ ಸ್ನೇಹಿತರನ್ನು ಭೇಟಿಯಾಗುತ್ತೀರಿ. ವ್ಯಾಪಾರಗಳು ಹೆಚ್ಚು ಉತ್ಸಾಹದಿಂದ ಕೂಡಿರುತ್ತವೆ. ವೃಷಭ ರಾಶಿ ಕೌಟುಂಬಿಕ ವ್ಯವಹಾರಗಳಲ್ಲಿ ಸ್ಥಿರವಾಗಿ ಯೋಚಿಸುವ ಮೂಲಕ ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳುವಿರಿ. ಕೈಗೊಂಡ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಬಂಧುಮಿತ್ರರೊಂದಿಗಿನ ವಾದ-ವಿವಾದಗಳು ಕೊನೆಗೊಳ್ಳುತ್ತವೆ. ದೂರದ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ವ್ಯಾಪಾರದಲ್ಲಿ ಲಾಭ …