ಯುವ ಜನಾಂಗ ಏಪ್ರಿಲ್ 26 ರಂದು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು – ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎನ್.ಎಸ್. ಸಂಜಯ್ ಗೌಡ
ಬೆಂಗಳೂರು: ಉತ್ತಮ ಸಮಾಜ ಮತ್ತು ಸರ್ಕಾರವನ್ನು ಆಯ್ಕೆ ಮಾಡಲು ಸಂವಿಧಾನದ ನಮಗೆ ಮತದಾನದ ಹಕ್ಕು ನೀಡಿದ್ದು, ಯುವ ಸಮೂಹ ತಪ್ಪದೇ ಮತದಾನ ಮಾಡಬೇಕು ಎಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಕರೆ ನೀಡಿದ್ದಾರೆ.
ಶ್ರೀ ಕೃಷ್ಣದೇವರಾಯ ಶಿಕ್ಷಣ ಟ್ರಸ್ಟ್ ನ ಸರ್.ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ಘಟಿಕೋತ್ಸವದಲ್ಲಿ 682 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಉತ್ತಮ ಸರ್ಕಾರ ಆಯ್ಕೆ ಮಾಡಲು ವಿದ್ಯಾರ್ಥಿ ಸಮೂಹ ಮುಂದಾಗಬೇಕು. ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು. ಯಾವುದೇ ಚುನಾವಣೆಯಲ್ಲೂ ಮತದಾನದಿಂದ ದೂರ ಉಳಿಯಬಾರದು ಎಂದರು.