ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಗೆಲುವು ಭರ್ಜರಿ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಹುಮತ ಪಡೆದಿದ್ದು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸೋಲುಚಿಡಿದ್ದಾರೆ.
ಕಾಂಗ್ರೆಸ್ ಶಾಸಕರಾದ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ನಡೆದಿದ್ದು, ಟಿಕೆಟ್ಗಾಗಿ ಎಚ್.ವೈ. ಮೇಟಿ ಅವರ ಮಕ್ಕಳಲ್ಲಿ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿತ್ತು.
ಅನುಕಂಪ ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಭಾವವು ಉಮೇಶ್ ಮೇಟಿ ಅವರ ಗೆಲುವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಉಮೇಶ್ ಮೇಟಿ ಅವರು ಗೆಲುವು ಸಾಧಿಸುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ ನಿರಾಳತೆ ಮೂಡಿಸಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 87624 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿಗೆ 70419 ಮತಗಳನ್ನು ಪಡೆದಿದ್ದಾರೆ.
ಈ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 17,205 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು



