ಕುಷ್ಟಗಿ : ಗೃಹ ರಕ್ಷಕದಳದ ಕಛೇರಿಯಲ್ಲಿ ಭಕ್ತ ಕನಕದಾಸ ಅವರ ಜಯಂತಿಯನ್ನು ಆಚರಿಸಲಾಯಿತು.
ಆರಂಭದಲ್ಲಿ ಕನಕದಾಸ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಸೀನಿಯರ್ ಪ್ಲಟೂನ ಕಮಾಂಡರ್ ರವಿಂದ್ರ ಬಾಕಳೆ ಅವರು ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಜಯಂತಿಯನ್ನು ಆಚರಣೆಗೆ ಸಾರ್ಥಕವಾಗುವದು ಎಂದು ಹೇಳಿದರು. ಪ್ಲಟೂನ ಕಮಾಂಡರ್ ನಾಗರಾಜ ಬಡಿಗೇರೆ. ಘಟಕಾಧಿಕಾರಿ ಶಿವಪ್ಪ ಚೂರಿ ಮಾತನಾಡಿ ಕನಕದಾಸ ಜಯಂತಿಯ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಗೃಹರಕ್ಷಕದಳ ಸಿಬ್ಬಂದಿ ಉಪಸ್ಥಿತರಿದ್ದರು.