ದಾವಣಗೆರೆ: ಕೋವಿಡ್ -೧೯ ಲಸಿಕೆ ವಿಚಾರ ಸಂಬಂಧ ಮೋದಿ ರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ವಾಗ್ದಾಳಿ ನಡೆಸಿದ್ದು, ಲಸಿಕೆ ತಯಾರಿಕಾ ಸಂಸ್ಥೆಯಿಂದಲೂ ಬಿಜೆಪಿ ರೂ.೫೨ ಕೋಟಿ ದೇಣಿಗೆ ಪಡೆದುಕೊಂಡಿದೆ ಎಂದು ಶನಿವಾರ ಆರೋಪಿಸಿದರು.
![](https://kannadanadunews.in/wp-content/uploads/2024/05/1-4.png)
ದಾವಣಗೆರೆಯಲ್ಲಿ ಚುನಾವಣಾ ಪ್ರಚಾರದವಲ್ಲಿ ಮಾತನಾಡಿದ ಅವರು, ಬಿಜೆಪಿಗೆ ದೇಣಿಗೆ ನೀಡಿರುವ ಕಂಪನಿಯು ತಯಾರಿಸಿರುವ ಲಸಿಕೆ ಹಾಕಿಸಿಕೊಂಡು ದೇಶದ ಸಾವಿರಾರು ಜನ, ಅದರಲ್ಲೂ ವಿಶೇಷವಾಗಿ ಗಟ್ಟಿಮುಟ್ಟಾದ ಯುವಕರು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿದ್ದಾರೆ’ ಎಂದು ಆರೋಪಿಸಿದರು.
‘ಕೆಲ ತಿಂಗಳ ಹಿಂದೆ ಗುಜರಾತ್ನಲ್ಲಿ ತೂಗು ಸೇತುವೆಯೊಂದು ಕುಸಿದು ಅನೇಕರು ಪ್ರಾಣ ಕಳೆದುಕೊಂಡರು. ಆ ಸೇತುವೆ ನರ್ಮಿಸಿದ್ದ ಗುತ್ತಿಗೆದಾರನೂ ಬಿಜೆಪಿಗೆ ದೇಣಿಗೆ ನೀಡಿದ್ದ. ಅದೇ ರೀತಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯು ಶ್ರೀಮಂತ ಉದ್ಯಮಿಗಳಿಂದ ರೂ.೭,೦೦೦ ಕೋಟಿ ಮೊತ್ತವನ್ನು ದೇಣಿಗೆ ರೂಪದಲ್ಲಿ ಪಡೆದು ಅತ್ಯಂತ ಶ್ರೀಮಂತ ಪಕ್ಷವೆಂದು ಹೆಸರಾಗಿದೆ’ ಎಂದು ವಾಗ್ದಾಳಿ ನಡೆಸಿದರು.
ವಿಪಕ್ಷಕ್ಕೆ ಸೇರಿರುವ ಅನೇಕ ರಾಜಕಾರಣಿಗಳ ಮನೆಗಳ ಮೇಲೆ ಆದಾಯ ತೆರಿಗೆ, ಇ.ಡಿ. ದಾಳಿ ನಡೆಸಿ, ಅವರನ್ನು ತನ್ನತ್ತ ಸೆಳೆಯುತ್ತಿರುವ ಬಿಜೆಪಿ, ಅವರಿಂದಲೂ ದೇಣಿಗೆ ಸಂಗ್ರಹಿಸಿದೆ. ಇದು ನಿಜಕ್ಕೂ ದೊಡ್ಡ ಭ್ರಷ್ಟಾಚಾರ.
ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳು ದೇಣಿಗೆ ಸಂಗ್ರಹಿಸಲು ಅವಕಾಶ ನೀಡಿದ್ದೇ ಬಿಜೆಪಿ ನೇತೃತ್ವದ ಕೇಂದ್ರ ರ್ಕಾರ. ಆದರೆ, ಬಾಂಡ್ ಮೂಲಕವೇ ದೇಣಿಗೆ ಸಂಗ್ರಹಿಸಿದ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಚುನಾವಣೆಯ ಸಂರ್ಭವೇ ರ್ಕಾರ ಮುಟ್ಟುಗೋಲು ಹಾಕಿಕೊಂಡು ರ್ಚು ಮಾಡಲೂ ಹಣವಿಲ್ಲದಂತೆ ಮಾಡಿತು ಎಂದು ದೂರಿದರು.
ದೇಶದ ರ್ಥ ವ್ಯವಸ್ಥೆ ಹದಗೆಡಲಿದೆ ಎಂಬ ಸಬೂಬು ಹೇಳುತ್ತ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿರುವ ಪ್ರಧಾನಿ, ತನ್ನ ಉದ್ಯಮಿ ಸ್ನೇಹಿತರ ರೂ. ೧೬ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಕೇವಲ ರೂ.೧೦,೦೦೦ದಷ್ಟು ಸಾಲ ಭರಿಸಲಾಗದೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಅವರ ಸಾಲವನ್ನು ಮನ್ನಾ ಮಾಡದವರು ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡಿದರೆ ರ್ಥ ವ್ಯವಸ್ಥೆ ಹಾಳಾಗುವುದಿಲ್ಲವೇ?’ ಎಂದು ಪ್ರಶ್ನಿಸಿದ ಅವರು, ಇದು ಅತ್ಯಂತ ದೊಡ್ಡ ಭ್ರಷ್ಟಾಚಾರ ಎಂದು ಕಿಡಿಕಾರಿದರು.
ಖಾಸಗಿಯವರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ವಜನಿಕ ವಲಯದ ಉದ್ಯಮಗಳನ್ನು ಬಂದ್ ಮಾಡಲಾಗಿದೆ. ಹೆದ್ದಾರಿ, ಬಂದರು, ಕಲ್ಲಿದ್ದಲು, ವಿದ್ಯುತ್, ವಿಮಾನ ನಿಲ್ದಾಣ ಮತ್ತಿತರ ವಲಯದ ಉದ್ಯಮಗಳನ್ನು ಖಾಸಗಿಯವರಿಗೆ ವಹಿಸಲಾಗುತ್ತಿದೆ. ಉದ್ಯೋಗ ಕ್ಷೇತ್ರವು ಖಾಸಗಿಯವರ ವಶದಲ್ಲಿದೆ. ಆದರೆ, ಖಾಸಗಿ ವಲಯದಲ್ಲಿ ಮೀಸಲಾತಿ ದೊರೆಯುತ್ತಿಲ್ಲ’ ಎಂದು ವಿವರಿಸಿದರು.
ಚುನಾವಣೆಯ ಸಂರ್ಭದಲ್ಲೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಲಾಗಿದೆ. ಈ ಕುರಿತು ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತಿದೆ. ಶ್ರೀಮಂತ ಉದ್ಯಮಿಗಳು ಮಾಧ್ಯಮಗಳನ್ನು ತಮ್ಮ ವಶದಲ್ಲಿ ಇಟ್ಟುಕೊಂಡಿರುವುದರಿಂದ ಇಂಥ ವ್ಯವಸ್ಥೆಯ ವಿರುದ್ಧ ಮಾಧ್ಯಮಗಳೂ ಧ್ವನಿ ಎತ್ತದಂತಾಗಿದ್ದು ವಿಷಾದನೀಯ ಎಂದರು.
೧೦ ರ್ಷ ಅಧಿಕಾರದಲ್ಲಿರುವ ಮೋದಿ ಅವರು, ಅಭಿವೃದ್ಧಿಯ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ನೋಟುಗಳ ಎಕ್ಸ್-ರೇ ಯಂತ್ರ ತಂದು, ಚಿನ್ನಾಭರಣ ಕದಿಯುತ್ತದೆಂದು, ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ ಒಂದು ಎಮ್ಮೆ ಬಿಟ್ಟು, ಇನ್ನೊಂದು ಎಮ್ಮೆಯನ್ನು ಕಾಂಗ್ರೆಸ್ ಕಸಿಯುತ್ತದೆಂದು ಮೋದಿ ಹೇಳಿದ್ದಾರೆ. ಮೋದಿಯವರಿಂದ ಇಷ್ಟೊಂದು ಕೀಳುಮಟ್ಟದ ಅಪಪ್ರಚಾರ ನಿರೀಕ್ಷೆ ಮಾಡಿದ್ದಿರಾ ಎಂದು ಜನತೆಗೆ ಇದೇ ವೇಳೆ ಪ್ರಶ್ನಿಸಿದರು.ಇದೇ ವೇಳೆ ದೇಶವನ್ನು ಸರಿಯಾದ ಹಾದಿಯಲ್ಲಿ ಕೊಂಡೊಯ್ಯಲು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿ ಕೂಟಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.
ನಿಮ್ಮ ಭವಿಷ್ಯ, ಅಭಿವೃದ್ಧಿ ಬಗ್ಗೆ ಯೋಚಿಸಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಮಟ್ಟದಲಲಿ ಮತ ಚಲಾಯಿಸಿ. ದಾವಣಗೆರೆಯಲ್ಲಿ ಉತ್ತಮ ಅಭ್ರ್ಥಿಯನ್ನು ನೀಡಿದ್ದೇವೆ, ಅವರನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿ ಎಂದು ಮತದಾರರನ್ನು ಒತ್ತಾಯಿಸಿದರು.