ಬೆಂಗಳೂರು,ಜನವರಿ, 18 : ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಬಿಜೆಪಿ ನಾಯಕರು ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹ್ಮದ್,ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಡಾ. ಬಿ.ಎಲ್ ಶಂಕರ್, ಮಾಜಿ ಸಂಸದರಾದ ಶ್ರೀ ವಿ.ಎಸ್ ಉಗ್ರಪ್ಪ, ಮಾಜಿ ನಿಗಮದ ಅಧ್ಯಕ್ಷರಾದ ವಿಜಯ್ ಮುಳಗುಂದ ಸೇರಿದಂತೆ ಪಕ್ಷದ ಮುಖಂಡರು ಒಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವು ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

