ರಾಜ್ಯ ಸರ್ಕಾರದ ವಿರುದ್ಧ ಸಿಂಧನೂರಿನಲ್ಲಿ ಬಿಜೆಪಿ ಪ್ರತಿಭಟನೆ  

ಸಿಂಧನೂರು : ಡೀಸೆಲ್ ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಪ್ರತಿಭಟನೆ ಮೆರವಣಿಗೆ ಸೋಮವಾರ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಬಿಜೆಪಿ ಪಕ್ಷದ ಪ್ರಮುಖ ಮುಖಂಡರು ಮೆರವಣಿಗೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಹೋಗಿದರು     ಈ ವೇಳೆ ಬಿಜೆಪಿ ಮುಖಂಡ ಕೆ. ಕರಿಯಪ್ಪ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಒಂದು ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಎಲ್ಲಾ ಸಮುದಾಯದವರಿಗೆ ಒಂದಲ್ಲ ಒಂದು ಸಮಸ್ಯೆ ಆಗುತ್ತಿದೆ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿ ಮತ್ತಷ್ಟು ಜನರಿಗೆ ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದೆ ಎಂದರು.   

   ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಗ್ರಾಮೀಣ ಅಧ್ಯಕ್ಷ ವೆಂಕೋಪ ರಾಮತ್ನಾಳ, ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಜನೂರ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಎಂ. ಬಸವರಾಜ ಮಹಿಳಾ ಘಟಕದ ಅಧ್ಯಕ್ಷ ಸಹನಾ ಹಿರೇಮಠ್ ಮುಖಂಡರಾದ ಶಿವಬಸನಗೌಡ ಗೊರೆಬಾಳ, ಲಿಂಗರಾಜ ಹೂಗಾರ, ರೆಬಾಳ್ ರವಿ ಉಪ್ಪಾರ್, ನಾಗರಾಜ ಅಂಗಡಿ, ಹನುಮೇಶ ಕುರಕುಂದಿ, ಹರೀಶ್ ಸೇರಿದಂತೆ ಇತರರು ಇದ್ದರು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top