ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ನಾಳೆ (ಜನವರಿ 29) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸೂಚಿಸಿದ್ದಾರೆ.
![](https://kannadanadunews.in/wp-content/uploads/2023/06/vijayendra-dh-1211042-1681890603-1218438-1683981958.jpg)
ನಾಳೆ ಬೆಳಿಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರೆಗೋಡಿನಲ್ಲಿ ಹನುಮಧ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದನ್ನು ಖಂಡಿಸಲಾಗುವುದು. ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ ಮೂಲಕ ಅವಮಾನ ಮಾಡಿದ್ದಾರೆ. ರಾಷ್ಟ್ರಧ್ವಜವನ್ನು ಬೆಳಿಗ್ಗೆ 9 ಗಂಟೆಗೆ ಹಾರಿಸಿ ಸಂಜೆ ವೇಳೆಗೆ ಅದನ್ನು ಕೆಳಕ್ಕಿಳಿಸಬೇಕೆಂಬ ನಿಯಮವನ್ನು ಉಲ್ಲಂಘಿಸಿ ಅವಮಾನ ಮಾಡಿದ್ದನ್ನು ಖಂಡಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
Facebook
Twitter
LinkedIn
WhatsApp
Email
Print
Telegram