ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರ ಕರಣ್​ ಬೆಂಗಾವಲು ವಾಹನ ಡಿಕ್ಕಿ, ಇಬ್ಬರು ಸಾವು

ಕೇಸರ್‌ಗಂಜ್‌ನ ಬಿಜೆಪಿ ಅಭ್ರ‍್ಥಿ ಕರಣ್‌ಭೂಷಣ್ ಸಿಂಗ್ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ರ‍್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಗೊಂಡಾದ ರ‍್ನಲ್‌ಗಂಜ್-ಹುಜೂರ್‌ಪುರ ರಸ್ತೆಯ ಬೈಕುಂತ್ ಪದವಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಾಲಕ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ಕೂಡಲೇ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದರು. ರಸ್ತೆಗಿಳಿದು ಪ್ರತಿಭಟನೆ ನಡೆಸುವುದರೊಂದಿಗೆ ಆಕ್ರೋಶಗೊಂಡ ಜನರು ಕಾರಿಗೆ ಬೆಂಕಿ ಹಚ್ಚಲು ಯತ್ನಿಸಿದರು.

ಕತ್ರಾಬಜಾರ್, ಪರಸ್ಪುರ್, ಕೌಡಿಯಾ ಮತ್ತು ರ‍್ನಲ್ಗಂಜ್ ಪೊಲೀಸ್ ಠಾಣೆಗಳ ಪೊಲೀಸ್ ಪಡೆಗಳು ಸ್ಥಳಕ್ಕೆ ಧಾವಿಸಿವೆ. ರ‍್ನಲ್‌ಗಂಜ್-ಹುಜೂರ್‌ಪುರ ರಸ್ತೆಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಜಾಮ್‌ ಉಂಟಾಗಿತ್ತು. ಅಪಘಾತದ ಸಮಯದಲ್ಲಿ ಕರಣ್ ಭೂಷಣ್ ವಾಹನದಲ್ಲಿ ಇದ್ದರಾ ಎನ್ನುವ ಕುರಿತು ತನಿಖೆ ನಡೆಯುತ್ತಿದೆ.

ದೂರಿನ ಆಧಾರದ ಮೇಲೆ ರ‍್ನಲ್ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸ್ ಪಡೆ ಹಾಜರಿದ್ದು, ಸದ್ಯ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಕರಣ್ ಸಿಂಗ್ ಕೇಸರ್ಗಂಜ್ನ ಬಿಜೆಪಿ ಅಭ್ರ‍್ಥಿಯಾಗಿದ್ದಾರೆ.

 

ಕರಣ್ ತಂದೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಹಿಂದೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದರು. ಲೈಂಗಿಕ ದರ‍್ಜನ್ಯವೆಸಗಿರುವ ಆರೋಪದ ಮೇಲೆ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನೂರಾರು ಮಹಿಳಾ ಕುಸ್ತಿಪಟುಗಳು ತಿಂಗಳುಗಟ್ಟಲೆ ಪ್ರತಿಭಟನೆ ನಡೆಸಿದ್ದರು. ಇದಾದ ಬಳಿಕ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕೈಬಿಡಲಾಯಿತು. ಅಷ್ಟೇ ಅಲ್ಲದೆ ಕೇಸರ್ಗಂಜ್ನಲ್ಲಿ ಅವರ ಬದಲಿಗೆ ಅವರ ಪುತ್ರ ಕರಣ್ಗೆ ಬಿಜೆಪಿ ಟಿಕೆಟ್ ನೀಡಿತ್ತು.

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top