ವಿಜಯಪುರ: ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
![](http://www.kannadanadunews.in/wp-content/uploads/2022/04/download-7.jpg)
ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.