ಅಂತರರಾಷ್ಟ್ರೀಯ

ಬೆಂಗಾವಲು ಇಲ್ಲ, ಶಿಷ್ಟಾಚಾರಗಳಿಲ್ಲ, ರಸ್ತೆ ತಡೆ ಇಲ್ಲ

ಯುಎಇ ಅಧ್ಯಕ್ಷರ ‘ನಡೆ’ಯನ್ನು ಕೊಂಡಾಡಿದ ನೆಟ್ಟಿಗರು..! ಅಬುಧಾಬಿ: ಯುಎಇ ಅಧ್ಯಕ್ಷರು ಬೆಂಗಾವಲು ಇಲ್ಲದೆ ರಸ್ತೆಯಲ್ಲಿ ಸಾಮಾನ್ಯ ವ್ಯಕ್ತಿಯಂತೆ ನಡೆದುಕೊಂಡು ಹೋಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದಾ ಜನರೊಂದಿಗೆ ನಿಕಟ ಸಂಪರ್ಕದಲ್ಲಿರುವ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಯಾವುದೇ ಭದ್ರತಾ ಪಡೆಗಳು ಇಲ್ಲದೆ ದೇಶದ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಅಂಥದ್ದೊಂದು ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಹಸನ್ ಸಜ್ವಾನಿ ಎಂಬ ಟ್ವಿಟ್ಟರ್ ಬಳಕೆದಾರರೊಬ್ಬರು ಯುಎಇ ಅಧ್ಯಕ್ಷರು ರಸ್ತೆಬದಿಯಲ್ಲಿ …

ಬೆಂಗಾವಲು ಇಲ್ಲ, ಶಿಷ್ಟಾಚಾರಗಳಿಲ್ಲ, ರಸ್ತೆ ತಡೆ ಇಲ್ಲ Read More »

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಭಾಗಿ

ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎ ಬಿ ಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ

ಲಂಡನ್: ಕರ್ನಾಟಕದ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಓದುತ್ತಿರುವ ಆಯ್ದ 1,000 ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಯನ್ನು ಒದಗಿಸಲು ಮತ್ತು ಶಾಲಾ ವಿದ್ಯಾರ್ಥಿಗಳ ಮಟ್ಟದಲ್ಲಿ ಸಂಪೂರ್ಣವಾಗಿ ಈ ಕಾರ್ಯಕ್ರಮವನ್ನು ವಿಸ್ತರಿಸಲು ಇಲ್ಲಿನ ಅನಲಿಟಿಕ್ಸ್ ಇನ್ಸ್ಟಿಟ್ಯೂಟ್ (ಐಒಎ) ತೀವ್ರ ಆಸಕ್ತಿ ವ್ಯಕ್ತಪಡಿಸಿದೆ.ಇಲ್ಲಿ ನಡೆಯುತ್ತಿರುವ ವರ್ಲ್ಡ್ ಎಜುಕೆಷನ್ ಫೋರಂ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣಅವರನ್ನು ಭೇಟಿ ಆ ಸಂಸ್ಥೆಯ ಉನ್ನತಾಧಿಕಾರಿಗಳ ನಿಯೋಗ ಈ ವಿಚಾರವನ್ನು ಹಂಚಿಕೊಂಡಿದೆ.ಸಚಿವರೊಂದಿಗೆ ಮಾತುಕತೆ ನಡೆಸಿದ ಅನಲಿಟಿಕ್ಸ್ ಐಒಎ ಪ್ರತಿನಿಧಿ ಡಾ.ಕ್ಲೇರ್ ವಾಲ್ಶ್, …

ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಜತೆ ಲಂಡನ್ ನಲ್ಲಿ ಮಾತುಕತೆ Read More »

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಯಾಗಿಲ್ಲ:ಮುಖ್ಯ ಮಂತ್ರಿ ಬೊಮ್ಮಾಯಿ

ನವದೆಹಲಿ: ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಾತನಾಡಿ ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಕಳುಹಿಸಲಾಗಿರುವ ಪಟ್ಟಿಯ ಬಗ್ಗೆ ವಿವರಗಳನ್ನು ನೀಡಲಾಗಿದೆ. ನಾಲ್ಕು …

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಯಾಗಿಲ್ಲ:ಮುಖ್ಯ ಮಂತ್ರಿ ಬೊಮ್ಮಾಯಿ Read More »

ಇಂಗ್ಲೆಂಡಿನ ದಂಡಿ ವಿ.ವಿ.ಗೆ ಸಚಿವ ಅಶ್ವತ್ಥನಾರಾಯಣ ಭೇಟಿ

ದಂಡಿ (ಸ್ಕಾಟ್ಲೆಂಡ್): ಜೀವವಿಜ್ಞಾನ ಕ್ಷೇತ್ರದ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಇಲ್ಲಿನ ದಂಡೀ ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗ ಮತ್ತು ಅತ್ಯಾಧುನಿಕ ಪ್ರಯೋಗಾಲಯಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಭೇಟಿ ನೀಡಿ, ಸಮಗ್ರವಾಗಿ ವೀಕ್ಷಿಸಿದರು.ಈ ಸಂದರ್ಭದಲ್ಲಿ ಸಚಿವರೊಂದಿಗೆ ಮಾತನಾಡಿದ ವಿ.ವಿ.ದ ಉನ್ನತಾಧಿಕಾರಿಗಳ ನಿಯೋಗವು, `ನಮ್ಮ ತಂಡವು ಬರುವ ಸೆಪ್ಟೆಂಬರಿನಲ್ಲಿ ಭಾರತಕ್ಕೆ ಭೇಟಿ ನೀಡಲಿದೆ. ಕರ್ನಾಟಕ ಸರಕಾರವು ಆಸಕ್ತಿ ವಹಿಸಿದರೆ ಜೀವವಿಜ್ಞಾನ ಅಧ್ಯಯನಕ್ಕೆ ಸಹಭಾಗಿತ್ವ ಹೊಂದಲು ಒಡಂಬಡಿಕೆಗೆ ಸಿದ್ಧರಿದ್ದೇವೆ. ಇಂತಹ ಕೇಂದ್ರಗಳನ್ನು …

ಇಂಗ್ಲೆಂಡಿನ ದಂಡಿ ವಿ.ವಿ.ಗೆ ಸಚಿವ ಅಶ್ವತ್ಥನಾರಾಯಣ ಭೇಟಿ Read More »

ಕೇದಾರನಾಥ ಶಿವ ದೇಗುಲಕ್ಕೆ ಡಿ. ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಭೇಟಿ

ಉತ್ತರಾಖಂಡ : ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ಶಿವ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಅನೇಕರು ಭಾಗಿ

ರಾಜಸ್ಥಾನದ : ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ನವ ಸಂಕಲ್ಪ ಶಿಬಿರದಲ್ಲಿ ಕೇಂದ್ರದ ಮಾಜಿ ಸಚಿವ ಪೃಥ್ವಿರಾಜ್ ಚೌಹಾಣ್, ಮಹಾರಾಷ್ಟ್ರದ ಸಚಿವೆ ಯಶೋಮತಿ ಠಾಕೂರ್, ಶಾಸಕರಾದ ಪ್ರಣತಿ ಶಿಂಧೆ, ಎಐಸಿಸಿ ಕಾರ್ಯದರ್ಶಿಗಳಾದ ಕ್ರಿಸ್ಟೋಫರ್, ಮೇಯಪ್ಪನ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಸ್ವಾತಿ ಮಾಳಗಿ ಅವರೊಂದಿಗೆ ಸಿದ್ದರಾಮಯ್ಯ ಅವರ ಆತ್ಮೀಯ ಮಾತುಕತೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ, ಭೋಸರಾಜು ಹಾಜರಿದ್ದರು.

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದ ಸಾರಾಂಶಗಳು

ಸಿದ್ದರಾಮಯ್ಯ ಅವರು ಮಂಡಿಸಿದ ಸಂಗತಿಗಳ ಸಾರಾಂಶಗಳು… ದೇಶದ ಆರ್ಥಿಕತೆ ದಿನದಿಂದ ದಿನಕ್ಕೆ ನಿರಾಶಾದಾಯಕ ಸ್ಥಿತಿಯತ್ತ ತಲುಪುತ್ತಿದೆ. ಜನರಿಗೆ ವಾಸ್ತವಾಂಶಗಳು ತಿಳಿಯಬಾರದೆಂದು ಅಂಕಿ ಅಂಶಗಳನ್ನು ತಿರುಚುವ ಕೆಟ್ಟ ಸಾಹಸಕ್ಕೆ ಸರ್ಕಾರ ಮುಂದಾಗಿದೆ. ಯೋಜನಾ ಆಯೋಗವನ್ನು ರದ್ದು ಮಾಡಿ ನೀತಿ ಆಯೋಗವನ್ನು ರಚಿಸಲಾಯಿತು. ಈ ನೀತಿ ಆಯೋಗದ ಕೆಲಸ ಕೇಂದ್ರ ಸರ್ಕಾರಕ್ಕೆ ಅಥವಾ ಬಿಜೆಪಿ ಸರ್ಕಾರಕ್ಕೆ ಬೇಕಾದ ಅಂಕಿ ಅಂಶಗಳನ್ನು ಸಿದ್ಧಪಡಿಸಿಕೊಡುವುದಾಗಿದೆ. ನ್ಯಾಯಬದ್ಧವಾಗಿ ನಡೆಸಬೇಕಾದ ಸಮೀಕ್ಷೆಗಳನ್ನು ನಡೆಸುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿಬಿಟ್ಟಿದೆ. ಉದಾಹರಣೆಗೆ ‘ಎನ್ ಎಸ್ ಎಸ್ ಓ’ ದೇಶದ …

ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದ ಸಾರಾಂಶಗಳು Read More »

ಎಐಸಿಸಿಯ ಚಿಂತನಾ ಶಿಬಿರ

ರಾಜಸ್ಥಾನ ; ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿಯ ಚಿಂತನಾ ಶಿಬಿರದಲ್ಲಿ ಸಿದ್ದರಾಮಯ್ಯ ಅವರು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರೊಂದಿಗೆ ಸಮಾಲೋಚನೆ ನಡೆಸಿದ ಸಂದರ್ಭ.

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಏಪ್ರಿಲ್ 07: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ : ಏಪ್ರಿಲ್ 16 ಮತ್ತು 17 ರಂದು …

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read More »

Translate »
Scroll to Top