ಇತರೆ

ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು ಮೃತಪಟ್ಟವರ ಸಂಖ್ಯೆ 29 ಕ್ಕೆ ಏರಿಕೆ, ಸಿಬಿ ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ ೨೯ಕ್ಕೆ ಏರಿಕೆಯಾಗಿದ್ದು, ೬೦ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಈ ಮಾಹಿತಿ ನೀಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಮೆಕ್ಕಾದಲ್ಲಿ ತಾಪಮಾನವು 50C ಗಿಂತ ಹೆಚ್ಚಳಕ್ಕೆ ಏರಿಕೆ: 550 ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವು

ಹಜ್: ಹಜ್ ಯಾತ್ರೆಗೆ ತೆರಳಿದವರಲ್ಲಿ ೫೫೦ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅವರಲ್ಲಿ ಕನಿಷ್ಠ ೩೨೩ ಮಂದಿ ಈಜಿಪ್ಟಿನವರಾಗಿದ್ದು, ಶಾಖ-ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಇಬ್ಬರು ಅರಬ್ ರಾಜತಾಂತ್ರಿಕರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ; ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; ಐವರು ದುರ್ಮರಣ, ೨೫ ಮಂದಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ೨೫ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಇಬ್ಬರು ಸರಗಳ್ಳರ ಬಂಧನ- 17 ಲಕ್ಷ 70 ಸಾವಿರ ಮೌಲ್ಯದ ಚಿನ್ನಾಭರಣ ವಶ

ಬಳ್ಳಾರಿ: ಸರಗಳ್ಳತನ ಮಾಡಿದ ಇಬ್ಬರು ಆರೋಪಿತರನ್ನು ಬಂಧಿಸಿದ್ದು, ಆರೋಪಿತರಿಂದ 295 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ತಿಳಿಸಿದ್ದಾರೆ.

ನರೇಗಾದಲ್ಲಿ ಬೋಗಸ್ ಆರೋಪ : ತನಿಖೆಗೆ ಒತ್ತಾಯ

ಬಳ್ಳಾರಿ: ತಾಲೂಕಿನ ಹಂದ್ಯಾಳು ಗ್ರಾಮ ಪಂಚಾಯ್ತಿಯಲ್ಲಿನ ನರೇಗಾ ಸೇರಿದಂತೆ ಹಲವು ಕಾಮಗಾರಿಗಳಲ್ಲಿ ಅವ್ಯವಹಾರವಾಗಿದೆ. ನರೇಗಾದಲ್ಲಿ ಬೋಗಸ್ ಆಗಿದೆಂದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರಿಗೆ ದೂರು ನೀಡಿದ್ದು. ಈ ಬಗ್ಗೆ ತನಿಖೆಯಾಗಬೇಕೆಂದು ಸ್ವತಃ ಆ ಗ್ರಾಮ ಪಂಚಾಯ್ತಿಯವ ಅಧ್ಯಕ್ಷ ಯು. ಗಣೇಶ್ ಕುಮಾರ್ ಒತ್ತಾಯ ಮಾಡಿದ್ದಾರೆ.

ನವೀಕೃತ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ

ಬೆಂಗಳೂರು: ಕರ್ನಾಟಕ ನವೀಕೃತ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಐಇಸಿ ಕೇಂದ್ರದಲ್ಲಿ ಕರ್ನಾಟಕ ಸೌರ ಇಂಧನ ಉತ್ಪಾದಕರ ಸಂಘ ಮತ್ತು ಫ್ರೈಡ್ ಎನರ್ಜಿ ಎನ್ವೈರ್ನಮೆಂಟ್ ರಿಸೋರ್ಸ್ ರೀಸರ್ಚ್ ಇನ್ಸ್ಟಿಟ್ಯೂಟ್ ಸಹಯೋಗದಲ್ಲಿ ಜೂನ್ 3 ರಿಂದ ಮೂರು ದಿನಗಳ 2ನೇ ಆವೃತ್ತಿಯ ಅಂತರರಾಷ್ಟ್ರೀಯ “ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ ಪೋ” ಆಯೋಜಿಸಲಾಗಿದ್ದು, ಹಸಿರು ಇಂಧನ ಲೋಕ ಅನಾವರಣಗೊಳ್ಳಲಿದೆ. ಈ ಬಾರಿಯ ಮೇಳದಲ್ಲಿ ಬೆಸ್ಕಾಂ, ಕ್ರೆಡೆಲ್ ಒಳಗೊಂಡಂತೆ 100 ಕ್ಕೂ ಅಧಿಕ ಸರ್ಕಾರಿ ಸಂಸ್ಥೆಗಳು ಮೇಳಕ್ಕೆ ಬೆಂಬಲ ನೀಡಿವೆ.

ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಮಿನಿ ಬಸ್ ಗೆ ಟ್ರಕ್ ಡಿಕ್ಕಿ: ಒಂದೇ ಕುಟುಂಬದ 7 ಮಂದಿ ಸಾವು, 25 ಜನರಿಗೆ ಗಾಯ

ಹರಿಯಾಣ: ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ವೇಳೆ ಟ್ರಕ್ ಒಂದು ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ೨೫ ಜನರು ಗಾಯಗೊಂಡಿದ್ದಾರೆ.

ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ಸುತ್ತೋಲೆ ಬಂದಿದೆ, ಈ ಬಗ್ಗೆ ಮಾಡಿ ತೀರ್ಮಾನಿಸುತ್ತೇವೆ -ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಹುಲಿ ಉಗುರಿನ ವಿಚಾರಕ್ಕೆ ಕೇಂದ್ರದಿಂದ ನಮಗೆ ಸುತ್ತೋಲೆ ಬಂದಿದೆ. ಹುಲಿ ಉಗುರಿನ ವಿಚಾರಕ್ಕೆ ರಾಜ್ಯ ಮಟ್ಟದಲ್ಲಿ ಆದೇಶ ಹೊರಡಿಸಿದ್ದೀರಿ. ಇದು ನಿಮ್ಮ ವ್ಯಾಪ್ತಿಗೆ ಬರಲ್ಲ, ನಾವು ನರ್ಧಾ ರ ಮಾಡ್ತೀವಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಕೇಂದ್ರ ರ್ಕಾ ರದ ಅಧಿಕಾರಿಗಳ ಜೊತೆ ರ್ಚೆ ಮಾಡ್ತೇವೆ. ನಮ್ಮ ಆದೇಶದ ಗಡುವು ಮುಗಿದಿದೆ, ಕೆಲವರು ವಾಪಸ್ ತಂದಿದ್ದಾರೆ. ಕಾನೂನು ಇಲಾಖೆ ಜೊತೆಗೆ ರ್ಚೆ ಮಾಡಿ ತೀರ್ಮಾನ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ, ಆಶು ರೈ ರಿಪೋರ್ಟ್ ಪಾಸಿಟಿವ್

ಬೆಂಗಳೂರು: ತೆಲುಗು ನಟಿ ಹೇಮಾ ಹಾಗೂ ಆಶು ರೈ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ. ಈ ಮೂಲಕ ತೆಲುಗು ನಟಿ ಹೇಮಾ ಹಾಗೂ ಆಶು ಸಹ ಡ್ರಗ್ಸ್ ಸೇವಿಸಿರುವುದ ದೃಢಪಟ್ಟಿದೆ. ಸಿಸಿಬಿ ತಂಡ 98 ಜನರ ಬ್ಲಡ್ ಸ್ಯಾಂಪಲ್ ಪಡೆದಿತ್ತು. ಅದರಲ್ಲಿ 84 ಜನರ ರಿಪೋರ್ಟ್ ಪಾಸಿಟಿವ್ ಬಂದಿದೆ.

Translate »
Scroll to Top