ಇತರೆ

ಸಂಗನಕಲ್ ಬೆಟ್ಟ

ನೂರಾರು ವರ್ಷಗಳ ಇತಿಹಾಸವಿರುವ ಸಂಗನಕಲ್ ಬೆಟ್ಟದ ಬಗ್ಗೆ ಸಾಕಷ್ಟು ಮಂದಿಗೆ ಸೂಕ್ತ ಮಾಹಿತಿಯೇ ಇಲ್ಲ. ಅದರ ಇತಿಹಾಸಕ್ಕೆ ಸಂಬಂಧಿಸಿದಂತೆ ಬಳ್ಳಾರಿ ನಗರದ ಗ್ರಂಥಾಲಯದ ಆವರಣದಲ್ಲಿ ವಸ್ತು ಸಂಗ್ರಹಾಲಯವೊಂದನ್ನು ಪ್ರಾರಂಭಿಸಿದ್ದು, ಅದರಲ್ಲಿ ನಿರ್ಮಿಸಲಾದ ಸಂಗನಕಲ್ ಬೆಟ್ಟದ ಮಾದರಿಯನ್ನು ನೋಡಿಕೊಂಡು ಸಂಗನಕಲ್ ಗೆ ಬಂದರೆ ಬೆಟ್ಟದ ಬಗ್ಗೆ ಸೂಕ್ತ ಮಾಹಿತಿ ಲಭ್ಯವಾಗಲಿದೆ. ಇನ್ನೂ ಈ ಬೆಟ್ಟದಲ್ಲಿ ಸಿಗಲಿರುವ ವಿಶೇಷತೆಗಳನ್ನು ಈ ವೀಡಿಯೋದಲ್ಲಿ ತಿಳಿಸಲಾಗಿದೆ.

ಗಾಣಾಗಟ್ಟೆ ಮಾಯಮ್ಮ

ಕೂಡ್ಲಿಗಿ ತಾಲ್ಲೂಕಿನಲ್ಲಿರುವ ಗಾಣಾಗಟ್ಟೆ ಮಾಯಮ್ಮಳ ಬಗ್ಗೆ ಕೇಳಿದ್ದೀರಾ? ಈಕೆಯನ್ನು ಕೊಲ್ಲಾಪುರದ ಮಹಾಲಕ್ಷ್ಮೀಯ ಪ್ರತಿರೂಪ ಈ ಮಾಯಮ್ಮ ಎನ್ನಲಾಗುತ್ತದೆ. ಇಲ್ಲಿ ಹರಕೆ ಹೊತ್ತರೆ ಬಯಕೆ ಈಡೆರುತ್ತದಂತೆ. ನೂರಾರು ಇತಿಹಾಸ ಇರುವ ಈ ದೇವಾಲಯ ಈಗ ಇಡೀ ಕರ್ನಾಟಕದಾದ್ಯಂತ ಪ್ರಸಿದ್ಧಿ ಹೊಂದಿದೆ. ಗಾಣಾಗಟ್ಟೆಯಲ್ಲಿ ದುಡ್ಡಿನ ಹರಕೆ ಕೊಟ್ರೆ ನಿಮ್ಮ ಬಯಕೆ ಈಡೇರುತ್ತದಂತೆ.

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ

ಕರ್ನೂಲು,ಮಾ,31 : ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಕಳವಳ ತಂದಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಬುಧವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸ್ಥಳೀಯರು ಮತ್ತು ಕನ್ನಡಿಗರ ನಡುವೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳ ಭಕ್ತರ ಮೇಲೆ ಹಲ್ಲೆಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ನಾನು ಕರ್ನೂಲ ಜಿಲ್ಲ ಪೊಲೀಸ್ …

ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ Read More »

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ

ವಾರಣಸಿ, ಮಾ, 26; ಭಗವತ್ಪಾದ ಶ್ರೀ ಶಂಕರಾಚಾರ್ಯರ ಉಪದೇಶಗಳನ್ನು ದೇಶಾದ್ಯಂತ ಜನ ಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ವೇದಾಂತ ಭಾರತಿಯ ಸಂರಕ್ಷಕರಾದ ಶ್ರೀ ಶಂಕರಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಉತ್ತರ ಪ್ರದೇಶದ ವಾರಣಸಿಯಲ್ಲಿ ರಾಷ್ಟ್ರಮಟ್ಟದ ಸಾಧು – ಸಂತರ ಎರಡು ದಿನಗಳ ಭವ್ಯ ಸಮಾವೇಶ ಇಂದಿನಿಂದ ಆರಂಭವಾಗಿದೆ. ಕಾಶಿಯ ಮಹಮೂರ್ ಗಂಜ್ ನಲ್ಲಿರುವ ಶ್ರೀ ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸಂತರು, ಮಹಾಂತರು, ಮಹಾಪುರುಷರು, ಪೀಠಾಧೀಶರು, ಮಹಾಮಂಡಲೇಶ್ವರರು, ಆಚಾರ್ಯ ಮಹಾಮಂಡಲೇಶ್ವರರು, ಮುಂತಾದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ಅನುಸರಿಸುವ …

ಕಾಶಿಯಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಧಾರ್ಮಿಕ ಸಮಾವೇಶ Read More »

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಮಾತು

ಮಂಗಳೂರು,ಮಾ,19 : ಪಠ್ಯ ವಿಷಯದಲ್ಲಿ ಭಗವದ್ಗೀತೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ: ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮ ತಕರಾರು ಇಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಖುರಾನ್, ಬೈಬಲ್ ಯಾವುದನ್ನಾದರೂ ಹೇಳಿಕೊಡಲಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಾದುದ್ದು ಮುಖ್ಯ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಅನುಗುಣವಾಗಿ ಉತ್ತಮ ಶಿಕ್ಷಣ ಸಿಗಬೇಕು. ಭಗವದ್ಗೀತೆ ಹೇಳಿಕೊಟ್ಟರೆ ತಪ್ಪೇನಿಲ್ಲ. ನಮಗೂ ಮನೆಯಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೇಳಿಕೊಟ್ಟಿದ್ದಾರೆ. ನಾವೇನು ಹಿಂದೂಗಳಲ್ಲವೆ. …

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರ ಮಾತು Read More »

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಅಂತರಾಷ್ಟ್ರೀಯ ಮಹಿಳೆಯರ ದಿನದ ಹಿನ್ನೋಟ : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಕ್ಲಾರಾ …

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ವಿಶ್ವೇಶ್ವರ ಹೆಗಡೆ ಕಾಗೇರಿಯವರು

ಮಂತ್ರಾಲಯ,ಮಾ,6 : ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಂತ್ರಾಲಯಕ್ಕೆ ಬೇಟಿ ನೀಡಿ ಗುರು ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನ ಪಡೆದು, ಪೀಠಾಧೀಶ್ವರರಾದ ಡಾ.ಶ್ರೀ ಶ್ರೀ ಸುಬುದೇಂದ್ರ ತೀರ್ಥ ಶ್ರೀಪಾದಗಳವರನ್ನು ಗೌರವಿಸಿ, ಶ್ರೀಗಳವರಿಂದ ಆಶೀರ್ವಾದ ಪಡೆದರು.

ಡಿ.ಕೆ. ಶಿವಕುಮಾರ್

ರಾಜ್ಯದ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು. ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಜನರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಮ್ಮ ಪಾದಯಾತ್ರೆ ಈಗ ಬೆಂಗಳೂರು ನಗರ ಪ್ರವೇಶಿಸಿದೆ. ಪೊಲೀಸ್ ಅಧಿಕಾರಿಗಳು, ಪಾಲಿಕೆ ಜಂಟಿ ಆಯುಕ್ತರು ಹಾಗೂ ಅಧಿಕಾರಿಗಳು ನಮ್ಮ ಬ್ಯಾನರ್ ಕಿತ್ತು ಹಾಕಿದ್ದಾರೆ. ನಮ್ಮ ಕೆಲ ನಾಯಕರು ಅದನ್ನು ತಡೆದಿದ್ದಾರೆ. ನಮ್ಮ ಬ್ಯಾನರ್ ತೆಗೆಸಲು ಪ್ರಯತ್ನ ಮಾಡಿದರೆ, …

ಡಿ.ಕೆ. ಶಿವಕುಮಾರ್ Read More »

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿದ್ದ ಅಗಾಧ ರಂಗ ಪ್ರತಿಭೆ ’ಎಂ.ಶ್ರೀನಿವಾಸುಲು’

ಬದುಕಿನುದ್ದಕ್ಕೂ ಹಲವಾರು ಅಡತಡೆಗಳು ಇದ್ದಿದ್ದೇ.ಆದರೆ ಅವುಗಳನ್ನು ಎದುರಿಸುವಲ್ಲಿ ಕೆಲವರು ಸೋತು ಸತ್ತರೆ ಇನ್ನು ಕೆಲವರು ಗೆದ್ದು ಬೀಗುತ್ತಾರೆ.ಆದರೆ ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಗೆಲ್ಲುವ ಚೈತನ್ಯ ತುಂಬುವ ಹಲವು ಮಾರ್ಗಗಳಲ್ಲಿ ರಂಗಭೂಮಿ ಅಗ್ರಮಾನ್ಯವಾದುದ್ದಾಗಿದೆ.ಆ ನಿಟ್ಟಿನಲ್ಲಿ ವೃತ್ತಿ ಮತ್ತು ಪ್ರವೃತ್ತಿಯನ್ನು ಸಮರ್ಥವಾಗಿ ನಿಭಾಯಿಸಿ ಬದುಕಿನುದ್ದಕ್ಕೂ ಗೆದ್ದು ಬೀಗಿದ ಹಲವರಲ್ಲಿ ಒಬ್ಬರು ಬಳ್ಳಾರಿ ಸಾರಿಗೆ ಇಲಾಖೆಯ ನಿವೃತ್ತ ನೌಕರರಾದ ಎಂ.ಶ್ರೀನಿವಾಸುಲು. ಇವರು ಕ್ರಿ.ಶ.೦೧.೦೯.೧೯೬೨ ರಲ್ಲಿ ಬಳ್ಳಾರಿಯ ಸತ್ಯ ನಾರಾಯಣ ಪೇಟೆಯಲ್ಲಿ ಎಂ.ರಾಮುಡು ಮತ್ತು ಪಾರ್ವತಮ್ಮರ ಮಗನಾಗಿ ಜನಿಸಿದರು. ಹುಟ್ಟಿದ್ದು ಬಡ ಕುಟುಂಬದಲ್ಲಾದ್ದರಿಂದ …

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿದ್ದ ಅಗಾಧ ರಂಗ ಪ್ರತಿಭೆ ’ಎಂ.ಶ್ರೀನಿವಾಸುಲು’ Read More »

Translate »
Scroll to Top