ತುಮಕೂರು

‘ಅಹಂಕಾರದ ಪರಮಾವಧಿ’: ಸರ್ಕಾರಕ್ಕೆ ಬಿಜೆಪಿ ಟೀಕೆ

ಬೆಂಗಳೂರು: ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜ್ಯನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ! ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯನವರ ನಡವಳಿಕೆಗೆ ಟೀಕೆ ಬಿಜೆಪಿ ಟೀಕೆ ಮಾಡಿದೆ.

ವಸತಿ ಹಾಗೂ ವಕ್ಫ್ ಖಾತೆ ಸಿಕ್ಕಿರುವುದು ಖುಷಿ ತಂದಿದೆ: ಜಮೀರ್ ಅಹಮ್ಮದ್

ತುಮಕೂರು: ಮುಖ್ಯಮಂತ್ರಿ ನನಗೆ ನೀಡಿರುವ ಖಾತೆಯಲ್ಲಿ ಬಡವರ ಸೇವೆ ಮಾಡಲು ಅವಕಾಶ ಇದೆ. ಹಾಗಾಗಿ ಈ ಖಾತೆ ಸಿಕ್ಕಿರುವುದು ನನಗೆ ಖುಷಿ ತಂದಿದೆ ಎಂದು ನೂತನ ವಸತಿ ಹಾಗೂ ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದರು.

ಸಾಧ್ಯವಾದಷ್ಟು ಬೇಗ 5 ಗ್ಯಾರೆಂಟಿಗಳು ಜಾರಿ: ಈಶ್ವರ ಖಂಡ್ರೆ

ತುಮಕೂರು: ಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಇಂದಿಲ್ಲಿ ತಿಳಿಸಿದರು.

ಮಳೆ ಕೊರತೆಯಿಂದ ಬಿತ್ತನೆ ಪ್ರಮಾಣ ಕುಂಠಿತ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲುಕಿನಲ್ಲಿ ಮುಂಗಾರು ಪೂರ್ವ ಅವಧಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿತ್ತನೆ ಪ್ರಮಾಣವೂ ಇಳಿಮುಖವಾಗಿದೆ. ಕಳೆದ ವರ್ಷ ಸುರಿದ ಭಾರಿ ಮಳೆಯಂತೆ ಈ ವರ್ಷವೂ ಸಹ ಮಳೆ ಬೀಳಬಹುದೆಂದು ನಿರೀಕ್ಷಿಸಿದ್ದ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ.

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ! ಎಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳು ಮುಖಾಮುಖಿ ನಾಲ್ವರ ದುರ್ಮರಣ

ತುರುವೇಕೆರೆ : ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿ ಸಮೀಪ ಯಡಿಯೂರು ಕಲ್ಲೂರು ಮುಖ್ಯರಸ್ತೆಯಲ್ಲಿ ಏಕಕಾಲದಲ್ಲಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಜಲಧಿಗೆರೆ ಕಡೆಯಿಂದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಲ್ಲೂರು ಕಡೆಗೆ  ಡಿಸ್ ಕವರ್ ಮತ್ತು ಪಲ್ಸರ್ ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರು ತೆರಳುತ್ತಿದ್ದರು ಎನ್ನಲಾಗಿದ್ದು ಇತ್ತ ಕಲ್ಲೂರು ಕಡೆಯಿಂದ ಸ್ಪೆಂಡರ್ ಬೈಕಿನಲ್ಲಿ  ಇಬ್ಬರು ಬರುತ್ತಿದ್ದರು ಎನ್ನಲಾಗಿದೆ. ಈ ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ  ನಾಲ್ಕು …

ಶೆಟ್ಟಿಗೊಂಡನಹಳ್ಳಿ ಸಮೀಪ ಮೂರು ದ್ವಿಚಕ್ರ ವಾಹನಗಳು ಮುಖಾಮುಖಿ ನಾಲ್ವರ ದುರ್ಮರಣ Read More »

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ ಮಕ್ಕಳಿಗೆ ಸಿಎಂ ಬುದ್ಧಿಮಾತು

ತುಮಕೂರು: ಮಕ್ಕಳು ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ವಿದ್ಯಾದೇವತೆ ಸರಸ್ವತಿಯ ವಾಹನ ಹಂಸದಂತೆ, ಮಕ್ಕಳು ಜ್ಞಾನದ ತೂಕವನ್ನು ಪಡೆದು, ಯಶಸ್ಸಿನ ಎತ್ತರಕ್ಕೆ ಹಾರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು ಹೇಳಿದರು. ಅವರು ಇಂದು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳು ಜ್ಞಾನದ ಬಾಗಿಲನ್ನು ತೆರೆದಿಟ್ಟುಕೊಳ್ಳುವ ಮೂಲಕ ಅವರಲ್ಲಿ ಕಲಿಕೆ ನಿರಂತರವಾಗುತ್ತದೆ. ಅಂತೆಯೇ ಬದುಕಿನಲ್ಲಿ ಯಶಸ್ಸೂ …

ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಿ ಮಕ್ಕಳಿಗೆ ಸಿಎಂ ಬುದ್ಧಿಮಾತು Read More »

ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ

ತುಮಕೂರು: ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು ತುಮಕೂರಿನ ಪ್ರೆಸ್ ಕ್ಲಬ್ ಇವರಿಗೆ ಹಸ್ತಾಂತರಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ನಿರ್ವಹಣೆಯ ಹೊಣೆಯನ್ನು ಪ್ರೆಸ್ ಕ್ಲಬ್‍ ಹೊತ್ತಿರುವುದು ದಿಟ್ಟ ಹೆಜ್ಜೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 65 ಲಕ್ಷ ರೂ.ಗಳನ್ನು ಇದಕ್ಕೆ ವೆಚ್ಚ ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ …

ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ Read More »

ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ

ತುಮಕೂರು : ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಮ್ಮ ಉಸ್ತುವಾರಿ ತುಮಕೂರು ಜಿಲ್ಲೆಯ ಹಿರಿಯ ಅಧಿಕಾರಿ ಗಳೊಂದಿಗೆ, ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸೂಕ್ತ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಶ್ರೀ ವೈ ಎಸ್ ಪಾಟೀಲ್ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ

ಹುಳಿಯಾರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವ ಸಲುವಾಗಿ ಸರ್ಕಾರ ೨ ನೇ ಹಂತದ ನೊಂದಣಿ ಕಾರ್ಯ ಆರಂಭಿಸಿದ ೨೭ ಗಂಟೆಯೊಳಗೆ ಸ್ಥಗಿತಗೊಳಿಸಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.ಮೊದಲ ಹಂತದ ರಾಗಿ ಖರೀದಿ ಪ್ರಕ್ರಿಯೆ ಮುಗಿದು ರೈತರ ಖಾತೆಗಳಿಗೆ ಹಣ ವರ್ಗಾವಣೆಯಾದ ನಂತರ ೨ ನೇ ಹಂತದ ರಾಗಿ ಖರೀದಿಗಾಗಿ ನೊಂದಣಿ ಕಾರ್ಯಕ್ಕೆ ಸರ್ಕಾರ ಹಸಿರು ನಿಶಾನೆ ತೋರಿತ್ತು. ಆದರೆ ಏ.೨೫ ರಂದು ನೊಂದಣಿ ಕಾರ್ಯ ಆರಂಭಿಸುವುದಾಗಿ ಸರ್ಕಾರ ಘೋಷಿಸಿದ್ದರೂ ಸಹ ಏ.೨೬ ರ ಮಧ್ಯಾಹ್ನದವರೆವಿಗೂ ನೊಂದಣಿ ಕಾರ್ಯ ಆರಂಭವಾಗಲಿಲ್ಲ. …

ರಾಗಿ ನೊಂದಣಿ ದಿಡೀರ್ ಸ್ಥಗಿತ ರೈತರ ಆಕ್ರೋಶ Read More »

Translate »
Scroll to Top