ವಿಜಯಾಪುರ

ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ

ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಸಂಗಾಪುರ ಗ್ರಾಮದಲ್ಲಿ ಇಂದು ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯ ಅವರು ಯಾತ್ರಿ ನಿವಾಸವನ್ನು ಲೋಕಾರ್ಪಣೆ ಮಾಡಿದರು. ಕ್ಷೇತ್ತದ ಶಾಸಕರೂ ಆಗಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಠಾಧೀಶರಾದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ, ಮಾಜಿ ಸಚಿವರಾದ ಅಪ್ಪಾಜಿ ನಾಡಗೌಡ, ಶಾಸಕರಾದ ಆನಂದ ನ್ಯಾಮಗೌಡ, ಸುನಿಲ್ ಪಾಟೀಲ್, ಪ್ರಕಾಶ್ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರು ಹಾಜರಿದ್ದರು.

ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ

ವಿಜಯಪುರ: ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಎಲ್ಲಾ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು ಎಂದಿದೆ. ರಾಜಕೀಯ ಸ್ಥಿತಿಗತಿಯ ಮೇಲೆ ಕೆಲವು ನಿರ್ಣಯಗಳಾಗುತ್ತವೆ ಎಂದರು.

ಕೋವಿಡ್ ಅಲ್ಪಪ್ರಮಾಣದಲ್ಲಿ ಹೆಚ್ಚಳ ಆದರೆ ಗಾಬರಿಯಾಗುವ ಅಗತ್ಯವಿಲ್ಲ

ವಿಜಯಪುರ : ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರಿಗೆ ವಿವತಿಸಾಗುವುದು ಎಂದು ಅವರು ಹೇಳಿದರು. ವಿಮಾನ ನಿಲ್ದಾಣಗಳಲ್ಲಿ …

ಕೋವಿಡ್ ಅಲ್ಪಪ್ರಮಾಣದಲ್ಲಿ ಹೆಚ್ಚಳ ಆದರೆ ಗಾಬರಿಯಾಗುವ ಅಗತ್ಯವಿಲ್ಲ Read More »

ಹೋನವಾಡ ಗ್ರಾಮ ಘಟಕ ಅನಾವರಣ

ಗಂಗಾವತಿ : ಬಿಜಾಪುರ ಜಿಲ್ಲೆ ಸೇರಿದಂತೆ ತಾಲೂಕ ಹಾಗೂ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಅಸ್ತಿತ್ವಕ್ಕೆ ವಿಜಯಪುರ,, ರೈತರ ಧ್ವನಿಯಾಗಿ ರಾಜ್ಯಾದ್ಯಂತ ಸಂಘಟನೆ ರಾಜ್ಯಾಧ್ಯಕ್ಷ ಶರಣೆಗೌಡ ಕೆಸರಟ್ಟಿ ದಿನಾಂಕ 18.4. 2022 ರಂದು ಬಿಜಾಪುರ ಜಿಲ್ಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದಿಂದ ಜಿಲ್ಲಾ ಘಟಕವನ್ನು ಹಾಗೂ ತಿಕೋಟಾ ತಾಲೂಕು ಘಟಕ ಮತ್ತು ಹೋನವಾಡ ಗ್ರಾಮ ಘಟಕವನ್ನು ಅನಾವರಣ ಮಾಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರನ್ನು ಹಾಗೂ ತಾಲೂಕ ಅಧ್ಯಕ್ಷರು ಗಳನ್ನು …

ಹೋನವಾಡ ಗ್ರಾಮ ಘಟಕ ಅನಾವರಣ Read More »

ಶಾಸನ ನೀಡಿದ ಹಲ್ಮಿಡಿ ಗ್ರಾಮದಲ್ಲಿ ೩ ವರ್ಷಕ್ಕೊಮ್ಮೆ ವಿಶೇಷ ಹಬ್ಬ

ಬೇಲೂರು : ನಾಲ್ಕು ಸಾವಿರ ಜನರಿಂದ ಬಾಗಿನ ಅರ್ಪಣೆ: ಇಲ್ಲಿಲ್ಲ ಜಾತಿ, ಮತ, ಪಂಥ ಅನಂತರಾಜೇಅರಸು ಬೇಲೂರು ಇದೊಂದು ಅಪರೂಪದ, ೩ ವರ್ಷಕ್ಕೆ ಒಮ್ಮೆ ನಡೆಯುವ ಹಿರೆಯೊಡೆಯಲಿಂಗೇಶ್ವರ ದೇವರ ಜಾತ್ರಾಮಹೋತ್ಸವ. ೩ ಸಾವಿರಕ್ಕೂ ಹೆಚ್ಚು ಬಾಗಿನ ಅರ್ಪಣೆ, ಸುಮಾರು ೪ ಸಾವಿರಕ್ಕೂ ಹೆಚ್ಚು ಭಕ್ತರು ಇಲ್ಲಿ ಸೇರುತ್ತಾರೆ.ಹೂವಿನಿಂದ ಪೂಜಿಸುವಂತಿಲ್ಲ, ಮಹಿಳೆಯರು ಹೂವು ಮುಡಿಯುವಂತಿಲ್ಲ. ದೇವರ ಒಕ್ಕಲಿಗ ಕುಟುಂಬದಲ್ಲಿ ಮುಟ್ಟುಮೈಲಿಗೆ ಆಗುವಂತಿಲ್ಲ. ಜಾತ್ರಾ ಮಹೋತ್ಸವ ನಡೆಯುವ ೭ ದಿನ ಮುಂಚಿನಿಂದಲೇ ಮಾಂಸಾಹಾರ ಸೇವನೆ, ರಾತ್ರಿ ವೇಳೆ ಯಾವುದೇ ರೀತಿಯ …

ಶಾಸನ ನೀಡಿದ ಹಲ್ಮಿಡಿ ಗ್ರಾಮದಲ್ಲಿ ೩ ವರ್ಷಕ್ಕೊಮ್ಮೆ ವಿಶೇಷ ಹಬ್ಬ Read More »

ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ.

ಹುಬ್ಬಳ್ಳಿ : ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಿಷ್ಟು: ಉಪಚುನಾವಣೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಹಾನಗಲ್ ಕ್ಷೇತ್ರಕ್ಕೆ ಈ ವರೆಗೆ ಒಂದು ಮನೆ ಕೊಟ್ಟಿಲ್ಲ, ಈಗ ಚುನಾವಣೆ ಬಂದಿರುವುದರಿಂದ 7,500 ಮನೆ ಮಂಜೂರು ಮಾಡಿರುವ ಪತ್ರ ಹಿಡಿದುಕೊಂಡು ಮುಖ್ಯಮಂತ್ರಿಗಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಅದನ್ನು ಕಟ್ಟಿಸಿಕೊಡ್ತಾರೊ ಇಲ್ಲವೋ …

ಎರಡೂ ಕಡೆ ಕಾಂಗ್ರೆಸ್ ಪಕ್ಷದ ಗೆಲುವು ನಿಚ್ಚಳವಾಗಿದೆ. Read More »

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ?

ವಿಜಯಪುರ: ಇವತ್ತು ಸಾಯಂಕಾಲದ ತನಕ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡರು. ಇಂದಿಲ್ಲಿ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ …

ನಾಳೆಯಿಂದ ನಮ್ಮ ಆಟ ಎಂದರೆ ದುಡ್ಡು ಹಂಚುವುದಾ ಸೋಮಣ್ಣನವರೇ? Read More »

Translate »
Scroll to Top