ಹುಬ್ಬಳ್ಳಿ

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು

ಹುಬ್ಬಳ್ಳಿ : ಬಿಜೆಪಿಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು ಎಂದು ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ಹಾಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನತೆಗೆ ತಿಳಿಸಿದ್ದಾರೆ. ಇಡೀ ದೇಶವೇ ತಲ್ಲಣಗೊಳ್ಳುವ ಈ ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದು, ದೊಡ್ಡ ಮಟ್ಟದ ಚರ್ಚೆಯಾಗುತ್ತಿದೆ. ಇನ್ನು ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ಹಣ ನೀಡಬೇಕು ಎಂದು ಕೇಳಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ. ಈ ವಿಚಾರವಾಗಿ ಎಸಿಬಿ ತನಿಖೆಯಾಗಬೇಕು ಎಂದು ನಾನು …

ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ಹಣ ನೀಡಬೇಕು Read More »

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ.ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ ದುಡ್ಡು ಮಾಡುವ ದುರುದ್ದೇಶದಿಂದ ಇಡೀ ವ್ಯವಸ್ಥೆಯನ್ನು ಹಾಳು ಮಾಡಲು ಹೊರಟಿರುವ ಅಂಥವರನ್ನು ಮೊದಲು ಹಿಡಿದು ಶಿಕ್ಷಿಸಿ. ಯಾವ ಅಭ್ಯರ್ಥಿಗಳು ಅಡ್ಡದಾರಿಯಲ್ಲಿ ಪಾಸಾಗಿದ್ದಾರೋ …

ಪಿಎಸ್ಐ ಪರೀಕ್ಷೆ ರದ್ದು ಬೇಡ; ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ Read More »

ಮಾತೃಭಾಷೆಗಳೇ ಸಾರ್ವಭೌಮ : ಸಿಎಂ

ಹುಬ್ಬಳ್ಳಿ,: ಮಾತೃಭಾಷೆಗಳೇ ಸಾರ್ವಭೌಮ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಅಜಯ ದೇವಗನ್ ಅವರ ಟ್ವೀಟ್ ಗೆ ಸುದೀಪ್ ಅವರು ಪ್ರತಿಯಾಗಿ ಟ್ವೀಟ್ ಮಾಡಿರುವುದು ಸರಿ ಇದೆ. ನಮ್ಮ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾದ ಮೇಲೆ ಆ ರಾಜ್ಯ ಗಳಲ್ಲಿ ಮಾತೃಭಾಷೆಗಳಿಗೆ ಪ್ರಾಧ್ಯಾನ್ಯತೆ ಇದೆ. ಅದೇ ಸಾರ್ವಭೌಮ. ಇದನ್ನು ಎಲ್ಲರೂ ಮನಗಂಡು ಗೌರವಿಸಬೇಕು ಎಂದು ಸಿಎಂ ಹೇಳಿದರು.

ಕೋವಿಡ್ ಕುರಿತು ಏಪ್ರಿಲ್ 27 ರಂದು ಪ್ರಧಾನಮಂತ್ರಿಗಳ ವೀಡಿಯೊಸಂವಾದ: ಸಿಎಂ

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು …

ಕೋವಿಡ್ ಕುರಿತು ಏಪ್ರಿಲ್ 27 ರಂದು ಪ್ರಧಾನಮಂತ್ರಿಗಳ ವೀಡಿಯೊಸಂವಾದ: ಸಿಎಂ Read More »

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ

ಹುಬ್ಬಳ್ಳಿ : ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣದಲ್ಲಿ ಬೇರೆ ಬೇರೆ ಶಕ್ತಿಗಳ ಹುನ್ನಾರ, ಕುಮ್ಮಕ್ಕು ಏನಿದೆ ಎಂದು ತನಿಖೆಯಾಗುತ್ತಿದೆ. ಈಗಾಗಲೇ ಬಂಧಿಸಿರುವವರಿಂದ ಹೇಳಿಕೆಗಳನ್ನು …

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ -ಬೊಮ್ಮಾಯಿ Read More »

ಅಂತರರಾಜ್ಯ ಜಲವಿವಾದ

ಹುಬ್ಬಳ್ಳಿ, ಮಾರ್ಚ್ 27: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂತರರಾಜ್ಯ ಜಲವಿವಾದಗಳ ಶೀಘ್ರವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ …

ಅಂತರರಾಜ್ಯ ಜಲವಿವಾದ Read More »

ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ

ಹುಬ್ಬಳ್ಳಿ, ಮಾರ್ಚ್ 27: ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಏಪ್ರಿಲ್ 05 ಕ್ಕೆ ರಾಜ್ಯಕ್ಕೆ ಪ್ರಧಾನಿಗಳ ಭೇಟಿ

ಹುಬ್ಬಳ್ಳಿ, ಮಾರ್ಚ್ 26: ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಅಮಿತ್ ಷಾ ಅವರಿಂದ ಕ್ಷೀರ ಅಭಿವೃದ್ಧಿ ಬ್ಯಾಂಕ್ ಉದ್ಘಾಟನೆ, ಇದಲ್ಲದೆ ಏಪ್ರಿಲ್ 01 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ರಂಗದಲ್ಲಿ ಹಲವಾರು …

ಏಪ್ರಿಲ್ 05 ಕ್ಕೆ ರಾಜ್ಯಕ್ಕೆ ಪ್ರಧಾನಿಗಳ ಭೇಟಿ Read More »

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ

ಹುಬ್ಬಳ್ಳಿ, ಮಾರ್ಚ್ 26: ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ …

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ Read More »

ಮೌಲ್ಯಗಳ ವರ್ಧನೆಗೆ ಸಕಾರಾತ್ಮಕ ಪಾತ್ರ ನಿರ್ವಹಿಸಿ

ಬೆಂಗಳೂರು, ಮಾರ್ಚ್ 6: ಸಮಾಜದಲ್ಲಿನ ಮೌಲ್ಯಗಳ ಕುಸಿತಕ್ಕೆ ಸಂಬಂಧಿಸಿದಂತೆ ನಿಷ್ಠುರವಾದ ಉದಾಸೀನತೆಯ ಧೋರಣೆ ನಿವಾರಣೆಯಾಗಬೇಕು ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ವಕೀಲರಿಗೆ ಕರೆ ನೀಡಿದ್ದಾರೆ.ಹೈಕೋರ್ಟ್ ಆವರಣದಲ್ಲಿ ಭಾನುವಾರ ವಕೀಲರ ಸಂಘ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶ್ರೀ ಕಾಗೇರಿ, ಸಮಾಜದಲ್ಲಿ ಮೌಲ್ಯಗಳ ಅಧಃಪತನದಿಂದ ವ್ಯವಸ್ಥೆ ಕುಸಿಯುವ ಅಪಾಯ ನೈಜವಾಗಿದ್ದು, ಈ ಅಪಾಯಕಾರಿ ಪ್ರವೃತ್ತಿಯನ್ನು ತಡೆಯಲು ವಕೀಲರು ಸಕಾರಾತ್ಮಕ ಪಾತ್ರ ನಿರ್ವಹಿಸುವ ಕಾಲ ಬಂದಿದೆ ಎಂದು ತಿಳಿಸಿದರು. “ನೀವು, ವಕೀಲರು ಸದಾ ಸಮಾಜದಲ್ಲಿ …

ಮೌಲ್ಯಗಳ ವರ್ಧನೆಗೆ ಸಕಾರಾತ್ಮಕ ಪಾತ್ರ ನಿರ್ವಹಿಸಿ Read More »

Translate »
Scroll to Top