ವಿಜಯನಗರ

ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿಗಳ ಭಾಷಣದ ವಿವರ

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳು.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೃಷ್ಣೆಗೆ ಇಂದು ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ನೀರಾವರಿ ಸಲಹಾ ಸಮಿತಿಯ ಸಭೆ

ಮುನಿರಾಬಾದ ನಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಂಸ್ಥೆ ಆಯೋಜಿಸಿದ್ದ 119ನೇ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಕೆಳಭಾಗದ ರಾಯಚೂರು ಜಿಲ್ಲೆಯ ತಾಲೂಕುಗಳಾದ ಸಿರವಾರ, ಮಾನ್ವಿ, ರಾಯಚೂರು ತಾಲೂಕಿನ ಜಮೀನುಗಳಿಗೆ ಅನುಗುಣವಾಗಿ ಮೈಲ್ 47, 69, 104 ರಲ್ಲಿ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ತುಂಗಭದ್ರಾ ಅಣೆಕಟ್ಟಿನಿಂದ 33 ಟಿಎಂಸಿ ಹೂಳು ತೆಗೆಯಲು ಆಗ್ರಹ

ತುಂಗಭದ್ರಾ ಅಣೆಕಟ್ಟಿನಿಂದ 33 ಟಿಎಂಸಿ ಹೂಳು ತೆಗೆಯಲು ಮತ್ತು ತುಂಗಭದ್ರಾ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ 200 ಟಿಎಂಸಿಗಿಂತ ಹೆಚ್ಚಿನ ಹೆಚ್ಚುವರಿ ನೀರನ್ನು ಸರಿಯಾಗಿ ಬಳಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಲೋಕಸಭೆಯ ಮಾಜಿ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದರು.

ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ ನೀರು

ಬಳ್ಳಾರಿ : ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 83.18 ಟಿ.ಎಂ.ಸಿ ನೀರು ಸಂಗ್ರಹ ಇದ್ದು, ಒಳ ಹರಿವು 21,492 ಕ್ಯೂಸೆಕ್ಸ್ ಇರುತ್ತದೆ. ಜಲಾಶಯದ ನೀರಿನ ಲಭ್ಯತೆಯನ್ನು ಆಧರಿಸಿ, ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳಿಗೆ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ವೇಳಾ ಪಟ್ಟಿಯಂತೆ ಕಾಲುವೆವಾರು ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ತಿಳಿಸಿದ್ದಾರೆ.

ಸಚಿವ ಜಮೀರ್ ಅಹಮದ್ ಖಾನ್ ಹುಟ್ಟುಹಬ್ಬದ ಪ್ರಯುಕ್ತ ಕಲಬುರಗಿಯಿಂದ ಬೆಂಗಳೂರಿಗೆ ಪಾದಯಾತ್ರೆ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರುತಿ ಎಂಬ ಯುವಕ ಕಲಬುರಗಿಯಿಂದ ಬೆಂಗಳೂರಿಗೆ ಪಾದಯಾತ್ರೆ ಯಲ್ಲಿ ಆಗಮಿಸಿದ್ದಾನೆ.

ಬಳ್ಳಾರಿ ಜಿಲ್ಲೆ ಕಣಿವೆಹಳ್ಳಿ ಕಲುಷಿತ ನೀರು ಸರಬರಾಜು : ಕೊಳವೆಬಾವಿ ಸ್ಥಗಿತ, ಟ್ಯಾಂಕರ್ ಮೂಲಕ ಸರಬರಾಜು

ಬೆಂಗಳೂರು: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಹಳ್ಳಿ ಗ್ರಾಮದ ಒಂದು ನಿರ್ದಿಷ್ಟ ಕೊಳವೆಬಾವಿಯ ನೀರು ಕಲುಷಿತವಾಗಿರುವುದು ಪತ್ತೆಯಾಗಿದ್ದು, ಈ ಕೊಳವೆ ಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ವಿಜಯನಗರ : ಖಾಲಿಯಾಗಿದ್ದ ತುಂಗಭದ್ರಾ ಜಲಾಶಯಕ್ಕೆ ದಿನೇ ದಿನೇ ಒಳಹರಿವು ಹೆಚ್ಚಾಗುತ್ತಿದೆ. ಶಿವಮೊಗ್ಗ ಭಾಗದಲ್ಲಿ ಹೆಚ್ಚಿನ ಮಳೆ ಬರುತ್ತಿರುವುದರಿಂದ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದೆ.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ

ದೆಹಲಿ ಘೋಷಣೆಯಲ್ಲಿ ಅಂತಿಮ ನಿರ್ಣಯ: ಅಮಿತಾಬ್ ಕಾಂತ್ ಹೊಸಪೇಟೆ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ ತಿಳಿಸಿದರು. ಹಂಪಿ ಎವಾಲ್ವೋ ಬ್ಯಾಕ್ ಖಾಸಗಿ ರೆಸಾರ್ಟ್ನಲ್ಲಿ  ಶನಿವಾರ ಮೂರನೇ ದಿನದ ಸಭೆಯ ನಂತರ ಈ …

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ Read More »

Translate »
Scroll to Top