ಶಿಕ್ಷಣ

2025 ರ ವೇಳೆಗೆ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿಜಪಾನ್ ಹಿಂದಿಕ್ಕಲಿರುವ ಭಾರತ!

ನವದೆಹಲಿ: ಸ್ಥೂಲ ಆರ್ಥಿಕತೆಯ ಹಲವು ಮಾನದಂಡಗಳನ್ನು ಉಲ್ಲೇಖಿಸಿರುವ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಭಾರತ 2025 ರ ವೇಳೆಗೆ ಜಪಾನ್ ನ್ನು ಹಿಂದಿಕ್ಕಿ 4 ನೇ ಅತಿ ದೊಡ್ಡ ರ್ಥಿ ಕತೆಯಾಗಲಿದೆ ಎಂದು ಹೇಳಿದ್ದಾರೆ.

ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ.

ನವದೆಹಲಿ: ೫ ಶಾಲೆಗಳಿಗೆ ಬಾಂಬ್ ಬೆದರಿಕೆ, ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ

ನವದೆಹಲಿ: ದೆಹಲಿಯ ೫ ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ, ಪರಿಶೀಲನೆ ನಡೆಸುತ್ತಿದೆ.

ರಾಜ್ಯದಲ್ಲಿ ೨೮,೬೫೭ ಬಾಲ ಗರ್ಭಿಣಿಯರು, ೧೦ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಟಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ತಾಯ್ತನದ ವಯಸ್ಸಿಗೂ ಮೊದಲೆ ರಾಜ್ಯದಲ್ಲಿ ಬಾಲ ರ್ಭಿ ಣಿಯರ ಸಂಖ್ಯೆ ಏರಿಕೆ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ೨೮,೬೫೭ ಬಾಲ ರ್ಭಿ ಣಿಯರು ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದ್ದಂತೆ ಹತ್ತು ಇಲಾಖೆಗೆ ಚಾಟಿ ಬೀಸಿದ್ದಾರೆ.

ವಿಶ್ರೀಕೃವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ನೇಮಕ

ಬಳ್ಳಾರಿ: ಘನತೆವೆತ್ತ ರಾಜ್ಯಪಾಲರ ಸಚಿವಾಲಯದ ಅಧಿಸೂಚನೆ ಮೇರೆಗೆ, ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯನ್ನಾಗಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಯವರ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ತಿಪ್ಪೇರುದ್ರಪ್ಪ ಜೆ. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಹುಬ್ಬಳ್ಳಿ: ನೇಹಾ ಕೊಲೆ ಆರೋಪಿ ಬಂಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಹುಬ್ಬಳ್ಳಿ: ಇತ್ತೀಚೆಗೆ ನಡೆದ ೨೩ ವರ್ಷದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಪ್ರಕರಣದ ಆರೋಪಿಗಳನ್ನು ಯಶಸ್ವಿಯಾಗಿ ಬಂಧಿಸಿದ ಪೊಲೀಸ್ ತಂಡದ ಕರ್ಯದವನ್ನು ಧಾರವಾಡ ನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಶ್ಲಾಘಿಸಿದ್ದಾರೆ. ಕೊಲೆ ನಡೆದ ಒಂದು ಗಂಟೆಯೊಳಗೆ ಆರೋಪಿ ಫಯಾಜ್ ನನ್ನು ಬಂಧಿಸಿದ ತಂಡದ ಎಲ್ಲಾ ಪೊಲೀಸರಿಗೂ ಶ್ಲಾಘನಾ ಪತ್ರಗಳ ಜೊತೆಗೆ ೨೫,೦೦೦ ರೂ. ನಗದು ಬಹುಮಾನ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

KCET exam-ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು: ಆತಂಕ, ಗೊಂದಲಗೊಂಡ ವಿದ್ಯರ‍್ಥಿಗಳು

ಬೆಂಗಳೂರು: ಕಳೆದ ಗುರುವಾರ ಮತ್ತು ಶುಕ್ರವಾರ ರಾಜ್ಯಾದ್ಯಂತ ನಡೆದ ವಿವಿಧ ವೃತ್ತಿಪರ ಕರ್ಸ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಯಲ್ಲಿ ಕೈಬಿಟ್ಟಿರುವ ಪಠ್ಯಕ್ರಮ ಹಾಗೂ ವಿಷಯೇತರ ಪ್ರಶ್ನೆಗಳು ಹಲವು ಬಂದಿದ್ದರಿಂದ ವಿದ್ಯರ್ಥಿ್ಗಳಿಗೆ ಈ ಬಾರಿ ಗೊಂದಲ ಮತ್ತು ಪರೀಕ್ಷೆ ಕಠಿಣವಾಗಿತ್ತು ಎಂದು ಹಲವರು ಹೇಳುತ್ತಿದ್ದಾರೆ.

ಯುಪಿಎಸ್ ಸಿ ಪರೀಕ್ಷೆ : ರಾಜ್ಯದ ಶೇ 50 ರಷ್ಟು ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ಅಭ್ಯರ್ಥಿಗಳು

ಬೆಂಗಳೂರು: ಕೇಂದ್ರ ಕೇಂದ್ರ ಲೋಕಸೇವಾ ಆಯೋಗದಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಹೆಚ್ಚಿನ ಸಾಧನೆ ಮಾಡಿದ್ದು, ಶೇ 50 ರಷ್ಟು ಅಭ್ಯರ್ಥಿಗಳು ಇಂಡಿಯಾ ಫಾರ್ ಐಎಎಸ್ ಅಕಾಡೆಮಿಗೆ ಸೇರಿದವರಾಗಿದ್ದಾರೆ.

ಇಸ್ರೇಲ್‌ – ಇರಾನ್‌ ಸಂಘರ್ಷ, ಕಳವಳಕ್ಕೆ ಕಾರಣ – ವಿದೇಶಾಂಗ ಸಚಿವ ಡಾ. ಎಸ್‌ ಜೈಶಂಕರ್‌

ಬೆಂಗಳೂರು: ಇಸ್ರೇಲ್ – ಇರಾನ್ ಸಂಘರ್ಷ ಜಾಗತಿಕವಾಗಿ ತೀವ್ರ ಕಳವಳಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಹೇಳಿದ್ದಾರೆ.
ರಾಜಾಜಿನಗರದ ದಿ ಇನ್ಟ್ಯಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ -ಐಸಿಎಸ್ಐ ಬೆಂಗಳೂರು ಚಾಪ್ಟರ್ ನಲ್ಲಿ ಆಯೋಜಿಸಿದ್ದ “ವಿಶ್ವಬಂಧು ಭಾರತ್” ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ವಿಶ್ವದ ಯಾವುದೇ ಸಂಘರ್ಷ, ಬಿಕ್ಕಟ್ಟು ಜಾಗತಿಕವಾಗಿ ಪರಿಣಾಮ ಬೀರುತ್ತದೆ. ಜಾಗತಿಕವಾಗಿ ತೈಲ ಬೆಲೆ, ಆಹಾರದರಗಳ ಏರಿಕೆ, ಹಣದುಬ್ಬರ ಹೆಚ್ಚಳ ಒಳಗೊಂಡಂತೆ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಜಗತ್ತಿನ ಎಲ್ಲಾ ಸಂಘರ್ಷ, ಸಮಸ್ಯೆಗಳಿಗೆ “ವಿಶ್ವಬಂಧು” ಪರಿಕಲ್ಪನೆಯೇ ಪರಿಹಾರವಾಗಿದೆ ಎಂದು ಪ್ರತಿಪಾದಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ: ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ೨ನೇ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ೧೭ ಕೊನೆಯ ದಿನವಾಗಿದೆ.
ಇದೇ ಮೊದಲ ಬಾರಿಗೆ ಮಂಡಳಿಯು ವರ್ಷದಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ. ಒಂದು ವೇಳೆ ೨ನೇ ಪರೀಕ್ಷೆ ಫಲಿತಾಂಶವು ಸಮಾಧಾನವಾಗದವರು ಪರೀಕ್ಷೆ ಮೂರನ್ನು ಬರೆಯಬಹುದು.

Translate »
Scroll to Top