ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಪುಷ್ಪ ಕೃಷಿಗೆ ಉತ್ತೇಜನ – ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ವ್ಯಾಪಕ ಪ್ರಚಾರ ನಡೆಸಿದರು.
ಹಿರಿಯ ರಾಜಕಾರಣಿ, ಮಾಜಿ ಶಾಸಕರಾದ ಕೆ.ಪಿ. ಬಚ್ಚೇಗೌಡ, ಅನುಸೂಯಮ್ಮ ಅವರ ಜೊತೆಗೂಡಿ ಭರ್ಜರಿ ಮತಬೇಟೆಯಲ್ಲಿ ತೊಡಗಿದರು.

ರೈತ ವಿರೋಧಿ ಕಾಂಗ್ರೆಸ್​ಗೆ ಪಾಠ ಕಲಿಸಿ; ಚಿಕ್ಕಬಳ್ಳಾಪುರದಲ್ಲಿ ಮೋದಿ ಕರೆ

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಬಿಜೆಪಿ ರ್ಕಾ ರ ಇದ್ದಾಗ ಕಿಸಾನ್ ಸಮ್ಮಾನ್ ಹಣದ ಜತೆಗೆ ೨,೦೦೦ ರೂ. ಸೇರಿಸಿ ೪,೦೦೦ ರೂಪಾಯಿಯನ್ನು ರೈತರಿಗೆ ನೀಡಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಅದನ್ನು ಸ್ಥಗಿತಗೊಳಿಸಲಾಯಿತು. ಇದರಿಂದಲೇ ಕಾಂಗ್ರೆಸ್ ರೈತ ವಿರೋಧಿ ಎಂಬುದು ಗೊತ್ತಾಗುತ್ತದೆ. ರೈತ ವಿರೋಧಿ ಕಾಂಗ್ರೆಸ್ಗೆ ಇಲ್ಲಿನ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ ಭಾವಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗರ್ಕಿ ಬಳಿ ಸಮಾವೇಶದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತಕ್ಕಾಗಿ ಎನ್ಡಿಎ ಅಭ್ರ್ಥಿ್ಗಳನ್ನು ಬೆಂಬಲಿಸಿ. ರ್ನಾ ಟಕದ ಅಭಿವೃದ್ಧಿಗೆ ಕೇಂದ್ರ ಎನ್ಡಿಎ ರ್ಕಾ ರ ಬದ್ಧವಾಗಿದೆ. ರ್ನಾ ಟಕದ ಉಜ್ವಲ ಭವಿಷ್ಯಕ್ಕಾಗಿ ಎನ್ಡಿಎ ಅಭ್ರ್ಥಿಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

‘ಕೈ’ಕೊಟ್ಟ ಚೆಂಬನ್ನು ಅಕ್ಷಯ ಪಾತ್ರೆಯಾಗಿಸಿ ಬಡವರಿಗೆ ಕೊಟ್ಟ ಮೋದಿ: ಹೆಚ್​ಡಿ ದೇವೇಗೌಡ

ಚಿಕ್ಕಬಳ್ಳಾಪುರ: ಸಂಪತ್ತು ಲೂಟಿ ಮಾಡಿ ೨೦೧೪ರಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಖಾಲಿ ಚೊಂಬು ಕೊಟ್ರು. ಮೋದಿ ಅಧಿಕಾರಕ್ಕೆ ಬಂದು ಸಣ್ಣ ರ್ಗಿದವರನ್ನೇ ಮೇಲಕ್ಕೆ ಎತ್ತಿದ್ದಾರೆ. ಆ ಮೂಲಕ ಖಾಲಿಯಾಗಿದ್ದ ಚೊಂಬನ್ನೇ ಮೋದಿ ಅಕ್ಷಯ ಪಾತ್ರೆಯಾಗಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗರ್ಕಿ ಬಳಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಚೊಂಬನ್ನು ಯಾರು ಕೊಟ್ಟವರು. ದೇಶದಲ್ಲಿ ಯುಪಿಎ ರ್ಕಾ ರ ಇದ್ದಾಗ ದೇಶದ ಸಂಪತ್ತನ್ನು ಲೂಟಿ ಮಾಡಿದರು.

ರಾಜ್ಯ ಸರ್ಕಾರ ಪಥನ ಆಗ್ತದೆ ಎನ್ಮುವುದು ಬರೀ ಭ್ರಮೆ: ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿದ್ದು ಮತ್ತೆ ನಾವೇ ಗೆದ್ದು ಬರ್ತೀವಿ: ಸಿ.ಎಂ

ಚಿಕ್ಕಬಳ್ಳಾಪುರ (ಬಾಗೇಪಲ್ಲಿ) 18: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.

ಈ ಬಾರಿ ಕೇಂದ್ರದಲ್ಲೂ BJP ಅಧಿಕಾರಕ್ಕೆ ಬರೋದಿಲ್ಲ: ಕೇಂದ್ರದಲ್ಲಿ INDIA ಅಧಿಕಾರಕ್ಕೆ ಬರುವುದರಿಂದ ಇಲ್ಲಿ ಸುಧಾಕರ್ ಸೋಲಿಸಿ : ಸಿ.ಎಂ.ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ: ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವವಾಗಿ ರಕ್ಷಾ ರಾಮಯ್ಯ ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಸ್ಪಷ್ಟವಾದ ಮಾತುಗಳಲ್ಲಿ ಘೋಷಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಬೃಹತ್ ರೋಡ್ ದಲ್ಲಿ ಮಾತನಾಡಿದರು. ನೀವೇ ತಿರಸ್ಕರಿಸಿದ NDA ಅಭ್ಯರ್ಥಿ ಸುಧಾಕರ್ ಮತ್ತೆ ಪ್ರಭಾವ ಬಳಸಿ ಲೋಕಸಭೆಗೆ ನಿಂತಿದ್ದಾರೆ. ಇವರನ್ನು ಈ ಬಾರಿಯೂ ಸೋಲಿಸಿದರೆ ನಿಮ್ಮ ಮತಕ್ಕೆ ಹೆಚ್ಚು ಗೌರವ ಬರುತ್ತದೆ ಎಂದು ಕರೆ ನೀಡಿದರು.

ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿ – ಸಹಕಾರ ಸಚಿವ ಕೆ.ಎನ್. ರಾಜಣ್ಣ

ಚಿಕ್ಕಬಳ್ಳಾಪುರ: ನಮ್ಮದು ನುಡಿದಂತೆ ನಡೆದ ಸರ್ಕಾರವಾಗಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪ್ರಾಮಾಣಿಕ, ನಿಷ್ಕಲ್ಮಷ ಮನಸ್ಸಿನವರು. ಅವರನ್ನು ಗೆಲ್ಲಿಸುವುದು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಗುರಿಯಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಕರೆ ನೀಡಿದ್ದಾರೆ.

ಮೋದಿ ಸರ್ಕಾರ ಪ್ರತಿಯೊಬ್ಬರ ತಲೆ ಮೇಲೆ 15 ಲಕ್ಷ ಸಾಲದ ಹೊರೆ ಹೊರಿಸಿದೆ – ಬಡವರ ವಿರೋಧಿ ಸರ್ಕಾರ ಕಿತ್ತೊಗೆಯಲು ಸಜ್ಜಾಗಿ – ರಕ್ಷಾ ರಾಮಯ್ಯ

ಬಾಗೇಪಲ್ಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಪು ಹಣ ನಿರ್ಮೂಲನೆ ಮಾಡಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಣ ಹಾಕುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಇದಕ್ಕಿಂತ ಗಂಭೀರವಾದ ಪರಿಸ್ಥಿತಿ ಎಂದರೆ ಮೋದಿ ಸರ್ಕಾರ ಪ್ರತಿಯೊಬ್ಬರ ತಲೆಯ ಮೇಲೆ 15 ಲಕ್ಷ ರೂಪಾಯಿ ಸಾಲದ ಹೊರೆ ಹೊರೆಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದ್ದಾರೆ.

ತೂಬಗೆರೆಯ ವೆಂಕಟೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಭಾಗಿ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಟಿಕೆಟ್ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಪರಸ್ಪರ ಮುಖಾಮುಖಿಯಾದರು.

ಭೋಗ ನಂದೀಶ್ವರ ಸೇರಿ ವಿವಿಧ ಶಿವನ ದೇವಾಯಗಳಿಗೆ ಭೇಟಿ ನೀಡಿದ ಎಂ.ಎಸ್. ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ : ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಚಿಕ್ಕಬಳ್ಳಾಪುರದಲ್ಲಿ ಕ್ರಿಕೆಟ್ ಟೂರ್ನಿಗೆ ಚಾಲನೆ

ಚಿಕ್ಕಬಳ್ಳಾಪುರ : ಊಹೆ ಮಾಡಿಕೊಂಡು ಕಟ್ಟುಕಥೆ ಕಟ್ಟುವುದನ್ನು ನಿಲ್ಲಿಸಿದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Translate »
Scroll to Top