ಬಳ್ಳಾರಿ

ಪವರ್ ಸ್ಟಾರ್ ಯುವಕರ ಪಾಲಿನ ಕಣ್ಮಣಿ: ಬಿ.ಶ್ರೀರಾಮುಲು

ಬಳ್ಳಾರಿ : ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಸ್ಯಾಂಡಲ್ವುಡ್ನ ಹೈವೋಲ್ಟೇಜ್ ಕರೆಂಟ್ ಅಂತಲೇ ಕರೆಯಿಸಿಕೊಳ್ಳುತ್ತಿದ್ದವರು ಪುನೀತ್ ರಾಜ್ಕುಮಾರ್ ಎಂದು ಬಳ್ಳಾರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಹೇಳಿದರು.

ಬಳ್ಳಾರಿಯ ರಾಯರ ಮಠಕ್ಕೆ ಬಿ.ಶ್ರೀರಾಮುಲು ಭೇಟಿ

ಬಳ್ಳಾರಿ :ಶ್ರೀರಾಘವೇಂದ್ರ ಗುರುಸಾರ್ವಭೌಮರ 403ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ 429 ವರ್ಧಂತಿ ಉತ್ಸವದ ಅಂಗವಾಗಿ ಮಾರ್ಚ್ 11ರಿಂದ ಇಂದಿನವರೆಗೂ ರಾಯರ ಮಠದಲ್ಲಿ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ನಡೆಯಿತ್ತೀದ್ದು ಬಿಜೆಪಿ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಭೇಟಿ ನೀಡಿದರು.

ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ನೀಡಲು ಆಗ್ರಹ

ಬಳ್ಳಾರಿ: ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ಸೇರಿದದಂತೆ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಶೌಚಾಲಯಗಳು ಇಲ್ಲ ಹಾಗೂ ಸುಮಾರು 250ಕ್ಕೂ ಹೆಚ್ಚು ಬಡ ಕುಟುಂಬಗಳು ನಿವೇಶನ ಮತ್ತು ವಸತಿ ಇಲ್ಲದೆ ಲಭ್ಯವಿರುವ ಚಿಕ್ಕಗುಡಿಸಲಲ್ಲಿ ಮೂರು ನಾಲ್ಕು ಕುಟುಂಬಗಳು ಒತ್ತಡದ ಸಂಕಷ್ಟದಲ್ಲಿ ವಾಸಿಸುತ್ತಿದ್ದು, ಮೂಲಭೂತ ಸೌಲಭ್ಯಗಳು ಮರೆ ಮಾಚಿವೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಪೆಡರೇಷನ್ ನ ಜಿಲ್ಲಾ ಅಧ್ಯಕ್ಷ ಯು.ಎರ್ರಿಸ್ವಾಮಿ ಅವರು ಹೇಳಿದರು.

ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ಮಾದರಿಯ ಕ್ರೀಡಾ ಸಮುಚ್ಚಯ, ಜಿಮ್ ಕಟ್ಟಡ ಕಾಮಗಾರಿಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಬಳ್ಳಾರಿ ವಿವಿಯ ನೂತನ ಕುಲಪತಿಗಳಾಗಿ ಪ್ರೊ.ಕೆ.ಎಂ.ಮೇತ್ರಿ ನೇಮಕ

ಬಳ್ಳಾರಿ : ಬಳ್ಳಾರಿ ವಿವಿಯ ಕುಲಪತಿಗಳಾಗಿದ್ದ ಸಿದ್ದು ಪಿ ಅಲಗೂರು ಅವರು ನಿವೃತ್ತಿ ಹೊಂದಿದ ನಂತರ ಸರಿ ಸುಮಾರು ಆರೇಳು ತಿಂಗಳ ಕಾಲ ಪ್ರಭಾರಿ ಕುಲಪತಿಗಳೇ ಆಡಳಿತ ನಡೆಸುತ್ತಿದ್ದರು. ಈ ಸ್ಥಾನ ಭರ್ತಿ ಮಾಡಲು ಇದೀಗ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನೇಮಕಗೊಂಡಿದ್ದಾರೆ.

ಮಕ್ಕಳಿಗೆ ಚಾಕೊಲೇಟ್ ಹಂಚಿ ಪಲ್ಸ್ ಪೋಲಿಯೊ ಲಸಿಕೆ ಹಾಕಿದ ಸಚಿವ ಬಿ.ನಾಗೇಂದ್ರ

ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.

ಸ್ಮರಣಾರ್ಥ  ಮೂರು ದಿನಗಳ ಫುಟ್ಬಾಲ್ ಪಂದ್ಯಾವಳಿ

ವಿಜಯನಗರ ಯುನೈಟೆಡ್ ಕ್ರೀಡಾ ಮತ್ತು ಸಾಂಸ್ಕತಿಕ ಸಂಸ್ಥೆಯಿಂದ ಪುನೀತ್ ರಾಜ್ಕು್ಮಾರ್ ಸ್ಮರಣಾರ್ಥ ಮೂರು ದಿನಗಳ ಫುಟ್ಬಾಲ್ ಪಂದ್ಯಾವಳಿ

ಶ್ರೀ ಕನಕದುರ್ಗಮ್ಮ ದೇವಸ್ಥಾನ ಸಿಡಿಬಂಡಿ ಮಹೋತ್ಸವ ಅದ್ದೂರಿ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಬರುವ ಮಾ.19 ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಸೂಚಿಸಿದರು.

5 ಕೋಟಿ ವೆಚ್ಚದಲ್ಲಿ ಅಲೆಮಾರಿ ಭವನ ನಿರ್ಮಾಣಕ್ಕೆ ಸಚಿವ ಬಿ.ನಾಗೇಂದ್ರ ಭರವಸೆ

ಬಳ್ಳಾರಿ: ಜಿಲ್ಲೆಯಲ್ಲಿನ ಅಲೆಮಾರಿ ಜನಾಂಗದವರ ಸಾಮಾಜಿಕ, ಸಾಂಸ್ಕøತಿಕ ಹಾಗೂ ಇತರೆ ಚಟುವಟಿಕೆಳಿಗಾಗಿ 5 ಕೋಟಿ ರೂ.ವೆಚ್ಚದಲ್ಲಿ ಸರ್ಕಾರದಿಂದ ಅಲೆಮಾರಿ ಭವನ ನಿರ್ಮಿಸಿಕೊಡುವುದಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಭರವಸೆ ನೀಡಿದರು.

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು: ಸಚಿವರಾದ ಶಿವರಾಜ್ ತಂಗಡಗಿ

ಹೊಸಪೇಟೆ (ವಿಜಯನಗರ): ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

Translate »
Scroll to Top