ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ  ಬಿಜೆಪಿಗೆ ಸವಾಲೆಸೆದ ಸಿಎಂ

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬರುವಂತೆ ಬಿಜೆಪಿಗೆ ಸವಾಲೆಸೆದ ಸಿಎಂ

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ಬೆಂಗಳೂರಿನ 20ಅಂತರಕಾಲೇಜು ಸಾಂಸ್ಕೃತಿಕ ಉತ್ಸವ-ವಾಸವಿ ವಿದ್ಯಾಪೀಠ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರೋಹಿ ಅಂತರಕಾಲೇಜು ಫೆಸ್ಟ್-2024 

ಮಕ್ಕಳಿಗೆ ಜ್ಞಾನದ ಜೊತೆ ಉತ್ತಮ ಸಾಂಸ್ಕೃತಿಕ ಚಟುವಟಿಕೆ ಅಗತ್ಯ -ಡಿ.ಆರ್.ವಿಜಯಸಾರಥಿ
ಬೆಂಗಳೂರು:ವಾಸವಿ ಜ್ಞಾನಪೀಠ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಅರೋಹಿ-2024
ಅಂತರಕಾಲೇಜು ಫೆಸ್ಟ್ ಆಯೋಜಿಸಲಾಗಿತ್ತು. ಸಂಗೀತ ನಿರ್ದೇಶಕ ಹೇಮಂತ್, ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಆರ್.ವಿಜಯಸಾರಥಿ ಅವರು ಸಂಗೀತ ನಿರ್ದೇಶಕ ಹೇಮಂತ್ ರವರು ಮತ್ತು ಪ್ರಾಂಶುಪಾಲರಾದ ಪದ್ಮ, ರಚನ, ಡಾ.ರಂಗಸ್ವಾಮಿ, ಸೌಭಾಗ್ಯರವರು ಅರೋಹಿ ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಅಂತರ ಕಾಲೇಜು ಫೆಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಾಸ್ಕ್ ವಿತರಿಸಿ, ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಕಿವಿ ಮಾತು ಹೇಳಿದ ಎಂ.ಎಸ್. ರಕ್ಷಾ ರಾಮಯ್ಯ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರಹಳ್ಳಿ, ಗುಡಿಹಳ್ಳಿ ಗ್ರಾಮದ ಶ್ರೀ ಓಂ ಶಕ್ತಿ ದೇವಿಯ ಮಾಲಾಧಾರಿ ಯಾತ್ರಿಗಳಿಗೆ ಎಂ.ಎಸ್.ರಾಮಯ್ಯ ಯೂತ್ ಫೌಂಡೇಶನ್ ನಿಂದ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ.

ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ

ಬೆಂಗಳೂರು : ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಆಯೋಜಿಸಿದ್ದು, ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಸಂತೆ ಏರ್ಪಡಿಸಲಾಗಿದೆ. ಡಿ. 25 ರಿಂದ ಜನವರಿಗೆ 5 ರವರೆಗೆ 10 ದಿನಗಳ ದನಗಳ ಜಾತ್ರೆ ನಡೆಯಲಿದೆ.

ಬೆಳಗಾವಿ: ಅಮಾನವೀಯ ಕೃತ್ಯದ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಂಗಳೂರು: ಸಂಸದರಾದ ಶ್ರೀಮತಿ ಅಪರಾಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಶ್ರೀಮತಿ ರಂಜಿತಾ ಕೋಲಿ, ಶ್ರೀಮತಿ ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಆಶಾ ಲಾಕ್ರಾ ಅವರ ನಿಯೋಗವು ಬೆಳಗಾವಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ಬೆತ್ತಲಾಗಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಮಾಹಿತಿ ಸಂಗ್ರಹಿಸಿತು.

ಪ್ರತಿ ವರ್ಷದಂತೆ ಈ ಬಾರಿಯೂ ಕೇಕ್‌ ಉತ್ಸವಕ್ಕೆ ಸಜ್ಜಾದ ಸಿಲಿಕಾನ್‌ ನಗರಿ

ಹೊಸ ಸಂಸತ್ ಭವನ ೪೯ ನೇ ವರ್ಷದ ಕೇಕ್ ಶೋ ನಲ್ಲಿ ಅನಾವರಣಗೊಂಡಿದೆ. ಇಡೀ ದೇಶದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಂಸತ್ ಭವನ ಬೆಂಗಳೂರು ನಗರದ ನಾಗರಿಕರ ಗಮನ ಸೆಳೆಯುತಿದೆ.
ಕೇಕ್ ಶೋಗೆ ಇಂದು ವಿಧ್ಯುಕ್ತ ಚಾಲನೆ ದೊರೆತಿದೆ. ಮೈ ಬೇಕರ್ಸ ಮಾರ್ಟ್ ಸಹಯೋಗದಲ್ಲಿ ಹೊಸ ಸಂಸತ್ ಭವನ ಮೈದಳೆದಿದೆ. ಅನೇಕ ಬೇಕರಿ ಕಲಾವಿದರ ತಿಂಗಳು ಗಟ್ಟಲೆ ಶ್ರಮ ಇದರಲ್ಲಿದೆ.

ಜನರ ಗುಳೆ ತಡೆಯಲು ಅಗತ್ಯ ಕ್ರಮ, ನರೇಗಾ ಯೋಜನೆಯಡಿ ಹೆಚ್ಚಿನ 50 ಮಾನವ ದಿನಗಳ ಅನುದಾನಕ್ಕಾಗಿ ಕೇಂದ್ರಕ್ಕೆ ಬೇಡಿಕೆ: ಕೃಷ್ಣ ಬೈರೇಗೌಡ

ಬೆಳಗಾವಿ
ಬರ ಹಿನ್ನೆಲೆಯಲ್ಲಿ ಜನರು ಗುಳೆ ಹೋಗುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಅಗತ್ಯ ಕ್ರಮ ತೆಗೆದುಕೊಂಡಿದೆ. ಅಲ್ಲದೆ, ನರೇಗಾ ಯೋಜನೆಯ ಅಡಿಯಲ್ಲಿ ಮಾನವ ದಿನಗಳನ್ನು 150 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಕೇಂದ್ರದಿಂದ ಇನ್ನೂ ನಮ್ಮ ಮನವಿಗೆ ಸಕಾರಾತ್ಮ ಪ್ರತಿಕ್ರಿಯೆ ಲಭ್ಯವಾಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಮುಂಜಾಗ್ರತಾ ಕ್ರಮಕೈಗೊಳ್ಳುವ ಕುರಿತು ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎನ್ ರವಿಕುಮಾರ, ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ನಿಯಮ 68ರ ಮೇರೆಗೆ ಎತ್ತಿದ ಚರ್ಚೆಗೆ ಸರ್ಕಾರದ ಪರವಾಗಿ ಕೃಷ್ಣಬೈರೇಗೌಡ ಅವರು ಉತ್ತರಿಸಿದರು.

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ,ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ದ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರ ನೀಡುತ್ತಾರೆ ಎಂದು ನಂಬಿದ್ದೇನೆ.

Translate »
Scroll to Top