ಬ್ಯಾಂಕ್ ಗಳ ಹಗರಣ ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ
ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು CBI ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.
ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನು CBI ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.
ಬೀದರ್ : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ “ಲೋಕನಾಯಕ” ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು.
ಬೆಂಗಳೂರು : ಐತಿಹಾಸಿ ತಾಣ ಕಾಡುಮಲ್ಲೇಶ್ವರಂನಲ್ಲಿ ಮೂರು ದಿನಗಳ ಕಡಲೆಕಾಯಿ ಪರಿಷೆಗೆ ವೈಭವದ ಚಾಲನೆ ದೊರೆಯಿತು. 300 ಕ್ಕೂ ಅಧಿಕ ಮಳಿಗೆಗಳಲ್ಲಿ ಕಡಲೆಕಾಯಿ ಮಾರಾಟ ನಡೆಯುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳು, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶದಿಂದ ರೈತರು ತಾವು ಬೆಳೆದ ಕಡಲೆ ಕಾಯಿಯನ್ನು ತಂದಿದ್ದಾರೆ. 20 ಅಡಿ ಉದ್ಜ ಮತ್ತು 20 ಅಡಿ ಅಗಲದ ನಂದಿ(ಬಸವಣ್ಣ)ಯನ್ನು 800ಕೆ.ಜಿ.ಕಡಲೆಕಾಯಿಯಿಂದ ಅಲಂಕರಿಸಲಾಗಿದೆ.
ಮಂಗಳೂರು : ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಗೊಂಡಿರುವ ಎರಡು ಏಜನ್ಸಿಗಳು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು : ಯುವ ನಾಯಕ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರ ಜನಪರ ಕಾರ್ಯಕ್ರಮ ಮಾದರಿಯಾಗಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದ್ದಾರೆ.
ಬಳ್ಳಾರಿ : ತೆಲಂಗಾಣದಲ್ಲಿ ಬಿಜೆಪಿ ಹಾಗೂ ಬಿಆರ್ ಎಸ್ ಪಕ್ಷದಿಂದ ಕಾಂಗ್ರೆಸ್ಗೆ ಭಯ ಇದೆ. ಹೀಗಾಗಿ ನಮ್ಮೆಲ್ಲರನ್ನು ಇಂದು ಸಂಜೆ ಒಳಗೆ ತೆಲಂಗಾಣಕ್ಕೆ ಹೋಗಲು ಎಐಸಿಸಿ ಸೂಚಿಸಿದೆ ಎಂದು ಕ್ರೀಡಾ ಮತ್ತು ಯುವಸಬಲೀಕರಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.
ಗಂಗಾವತಿ: ಕಳೆದ ನ.25 ರಂದು ಮಧ್ಯೆ ರಾತ್ರಿ ಮುಸ್ಲಿಂ ಅಂಧ ವೃದ್ದನನ್ನು ಬೈಕ್ ಮೇಲೆ ಸಿದ್ದಿಕೇರಿಗೆ ಕರೆದೊಯ್ದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ದೋಚಿ ಗಡ್ಡಕ್ಕೆ ಬೆಂಕಿ ಹಚ್ಚಿದ ಅಮಾನವೀಯ ಘಟನೆಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಉಗ್ರವಾಗಿ ಖಂಡಿಸಿದ್ದಾರೆ.
ಕೊರಟಗೆರೆ: ಆರೋಗ್ಯ ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಬಡಕುಟುಂಬಗಳಿಗೆ ಅನುಕೂಲವಾಗಲೆಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಸಿಇಓ ಪ್ರಭು ತಿಳಿಸಿದರು.
ಬಳ್ಳಾರಿ : ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ ಒಟ್ಟಾರೆ 682567 ಜನರು ಐ.ಸಿ.ಟಿ.ಸಿ ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದು, ಅವರಲ್ಲಿ 2388 ಜನರಿಗೆ ಹೆಚ್.ಐ.ವಿ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ತಿಳಿಸಿದರು.
ಬಳ್ಳಾರಿ : ಭಕ್ತ ಕನಕದಾಸರ ತಾತ್ವಿಕತೆಯ ಚಿಂತನೆ, ಸಂಗೊಳ್ಳಿ ರಾಯಣ್ಣನ ಧೈರ್ಯ ಹಾಗೂ ಇದೇ ಸಮುದಾಯದ ಮುಖ್ಯಮಂತ್ರಿ ಸಿದ್ದರಾಮಯ್ಯರ ಚಾಣಕ್ಯತನ ಮಾದರಿಯಾಗಿದ್ದು, ಮಹನೀಯರ ಆದರ್ಶ ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.