ಜಿಲ್ಲೆಗಳು

ನವಜಾತ ಶಿಶುವಿಗೆ ಆರು ತಿಂಗಳ ವಯಸ್ಸಿನವರೆಗೆ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಕೊಡಬೇಡಿ: ಡಾ ವೈ ರಮೇಶ ಬಾಬು

ಬಳ್ಳಾರಿ: ಹೆರಿಗೆ ನಂತರದಲ್ಲಿ ನವಜಾತ ಶಿಶುವಿಗೆ ಆರು ತಿಂಗಳು ವಯಸ್ಸು ತುಂಬುವವರೆಗೂ ಬಾಲ್ಯದಲ್ಲಿ ಮಗುವಿನ ಸದೃಡ ಆರೋಗ್ಯಕ್ಕೆ ಕಾರಣವಾದ ತಾಯಿಯ ಎದೆ ಹಾಲು ಹೊರತುಪಡಿಸಿ ಬೇರೆ ಏನನ್ನು ಮಕ್ಕಳಿಗೆ ಕೊಡಬೇಡಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ವೈ ರಮೇಶ್ ಬಾಬು ಮನವಿ ಮಾಡಿದರು.

ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಹಂಪಿಯಲ್ಲಿ ಸುರಿದ ಮಳೆಗೆ ಉರುಳಿದ ಬಾಳೆ

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ಸುರಿದ ಗಾಳಿ, ಮಳೆಗೆ ಸಾವಿರಾರು ಬಾಳೆಗಿಡಗಳು ನೆಲಕ್ಕುರುಳಿವೆ

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಭರವಸೆ ಮೂಡಿಸಿದ ಗದಗದ ಗ್ರಾಮೀಣ ಆಸ್ಪತ್ರೆ: ಅತ್ಯಲ್ಪ ವೆಚ್ಚದಲ್ಲಿ ಸೌಲಭ್ಯ

ಗದಗ: ವೈದ್ಯಕೀಯ ಕ್ಷೇತ್ರದಲ್ಲಿನ ಪ್ರಗತಿಗಳು ರೋಗಿಗಳನ್ನು ಸಾವಿನ ದವಡೆಯಿಂದ ಪಾರು ಮಾಡಿ ಆಶಾಕಿರಣ ಮೂಡಿಸುತ್ತಿವೆ. ಆದರೆ ಅದಕ್ಕೆ ಭರಿಸಬೇಕಿರುವ ವೆಚ್ಚಗಳನ್ನು ಹೊಂದಿಸುವುದು ಅನೇಕರಿಗೆ ಕಷ್ಟ. ಪ್ರಮುಖವಾಗಿ ಈ ಸಮಸ್ಯೆ ಗ್ರಾಮೀಣ ಭಾಗದವರನ್ನು ಹೆಚ್ಚು ಬಾಧಿಸುತ್ತದೆ.

ತುಮಕೂರು: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡವಾಣೆಯಲ್ಲಿ ನಡೆದಿದೆ.

ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ: ಹಳೇ ಕೇಸ್​ಗಳು ರೀ ಓಪನ್​

ಹಾಸನ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ) ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ವಕೀಲ ದೇವರಾಜೇಗೌಡ ವಿರುದ್ಧದ ಅತ್ಯಾಚಾರ ಪ್ರಕರಣ ಜೊತೆಗೆ ಹಲವು ಹಳೆ ಕೇಸ್ಗಳನ್ನು ವಿಶೇಷ ತನಿಖಾ ಅಧಿಕಾರಿಗಳು ರೀ ಓಪನ್ ಮಾಡಿದ್ದಾರೆ. ದೇವರಾಜೇಗೌಡ ವಿರುದ್ಧ ಚೀಟಿಂಗ್ ಕೇಸ್ ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಪ್ರಕರಣ ಜೊತೆಗೆ ಹಳೇ ಪ್ರಕರಣಗಳ ತನಿಖೆಯೂ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡರನ್ನು ಎಸ್ಐಟಿ ಅಧಿಕಾರಿಗಳು ಸೋಮವಾರ (ಮೇ13) ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಕುಮಾರಸ್ವಾಮಿ ಏನು ಸಾಚ ಅಲ್ಲ, ಅವರು ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ: ಕೈ ಶಾಸಕ ಸ್ಫೋಟಕ ಹೇಳಿಕೆ

ಮಂಡ್ಯ: ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಞಉಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದರ್ಜ ನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧರ್ಯಕ ಮಾಡಲಿದ್ದಾರೆ. ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೇರೆ ಪಕ್ಷಗಳಲ್ಲಿದ್ದರೂ ಶ್ರೀನಿವಾಸ್ ಪ್ರಸಾದ್ ಹಾಗೂ ನನ್ನ ನಡುವೆ ಉತ್ತಮ ಸ್ನೇಹ ಬಾಂಧವ್ಯ ಮತ್ತು ಒಡನಾಟವಿತ್ತು – ಸಿಎಂ ಸಿದ್ದರಾಮಯ್ಯ

ಮೈಸೂರು: ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು.

ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ, ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ: ಶಿಕ್ಷಣ ಸಚಿವ

ಶಿವಮೊಗ್ಗ: ೨೦೨೩-೨೦೨೪ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ನಾನು ಓದುವುದರಲ್ಲಿ ಅಷ್ಟು ಬುದ್ದಿವಂತನಾಗಿರಲಿಲ್ಲ. ನಾನು ಸಹ ಫೇಲ್ ಆಗಿದ್ದೇನೆ. ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ. ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ. ನನ್ನ ಬಗ್ಗೆ ಕೆಟ್ಟ ಟ್ರೋಲ್ ಮಾಡುವವರು ಎಂದೂ ಉದ್ಧಾರಾಗಲ್ಲ ಎಂದು ಶಾಪ ಹಾಕಿದರು.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯರ‍್ಥಿನಿ ಮೀನಾ ರುಂಡ ಪತ್ತೆ

ಕೊಡಗು: ಹತ್ಯೆಯಾದ ಸೋಮವಾರಪೇಟೆ ತಾಲೂಕಿನ ಸರ್ಲಿಬ್ಬಿ ಗ್ರಾಮದ ಎಸ್ಎಸ್ಎಲ್ಸಿ ವಿದ್ಯರ್ಥಿಸನಿ ಮೀನಾಳ ರುಂಡ, ಕೊಲೆ ನಡೆದ ಸ್ಥಳದಿಂದ ೩೦೦ ಮೀ ದೂರದ ಪೊದೆಯಲ್ಲಿ ಪತ್ತೆಯಾಗಿದೆ. ಮೀನಾಳನ್ನು ಕೊಲೆ ಮಾಡಿದ ಆರೋಪಿ ಪ್ರಕಾಶನನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋದಾಗ ರುಂಡ ಇದ್ದ ಸ್ಥಳ ತೋರಿಸಿದ್ದಾನೆ.

Translate »
Scroll to Top