ಕೋಲಾರ

ಸಚಿವರ ಸಮ್ಮುಖದಲ್ಲೇ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ

ಕೆ.ಸಿ ವ್ಯಾಲಿ ನೀರಿನ ಗುಣಮಟ್ಟದ ಬಗ್ಗೆ ಇದ್ದಂತಹ ಗ್ರಾಮಸ್ಥರ ಅನುಮಾನಗಳನ್ನ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಐಐಎಸ್ಸ್ಸಿ ಮತ್ತು ಇಹೆಚ್ಇಆರ್ ವಿಜ್ಞಾನಿಗಳಿಂದ ಸ್ಥಳದಲ್ಲೇ ನೀರಿನ ಗುಣಮಟ್ಟ ಪರಿಶೀಲನೆಯ ಮೂಲಕ ಪರಿಹರಿಸಿದರು.

ಸೆಪ್ಟೆಂಬರ್ 12ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪವರ್ ಕಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆಯಾ ಕಾಂಗ್ರೆಸ್‍ ಸರ್ಕಾರ…?

ಬೆಂಗಳೂರು: ಮಳೆಯ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪವರ್ ಕಟ್ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.

ಕೋಲಾರದಲ್ಲಿ ಧ್ವಜಾರೋಹಣ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪಗಳ ಸುರಿಮಳೆ

ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರು ಇಂದು ಕೋಲಾರ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಹಾರಿಸಿ ಜಿಲ್ಲೆಯ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದರು. ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಪೌರ ಕಾರ್ಮಿಕರನ್ನು ಖಾಯಂಗೊಳಸಲು  ಪೌರಕಾರ್ಮಿಕರ ಮಹಾ ಸಂಘ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬೆಜಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘ ಆಗ್ರಹಿಸಿದೆ.

ಕೋಲಾರದಲ್ಲಿ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

ಬಳ್ಳಾರಿ: ಇತ್ತೀಚೆಗಷ್ಟೇ ಕೋಲಾರ ಜಿಲ್ಲೆಯ ಕೆಂದಟ್ಟಿ ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಬಳ್ಳಾರಿ ಮೂಲಕ ವೈದ್ಯಕೀಯ ವಿದ್ಯಾರ್ಥಿನಿ ದರ್ಶಿನಿ ಸಾವಿಗೆ ಎಂವಿಜೆ ಕಾಲೇಜಿನ ಪ್ರಾದ್ಯಾಪಕರೇ ಕಾರಣರಾಗಿದ್ದು, ಆ ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಜಿಲ್ಲಾ ಗೊಲ್ಲರ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ.

ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಜಿ ಸಿಎಂ

ಕೋಲಾರ/ಬಂಗಾರಪೇಟೆ: ಈಗ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ನಾಲ್ಕು ದಿನಗಳ ಕಾಲ ಅವುಗಳನ್ನು ಮಾಧ್ಯಮಗಳಲ್ಲಿ ಹೈಪ್‌ ಮಾಡಿ ಆ ಮೇಲೆ ಗುಂಡಿ ತೋಡಿ ಮುಚ್ಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು. ಜನತಾ ಜಲಧಾರೆಯ ಪ್ರಯುಕ್ತ ಬಂಗಾರಪೇಟೆ ತಾಲೂಕಿನ ಯರಗೋಳ್‌ ಜಲಾಶಯದಲ್ಲಿ ಜಲ ಸಂಗ್ರಹ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡದರು ಅವರು.ಈಗ ಪೊಲೀಸ್‌ ಇಲಾಖೆಯಲ್ಲಿ ನಡೆದಿರುವ ಪಿಎಸ್‌ʼಐ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಒಂದು ವಾರದ ಕಾಲ ಅವರನ್ನು ಬಂಧಿಸಿದೆವು, ಇವರನ್ನು ಬಂಧಿಸಿದೆವು ಎಂದು ಪ್ರಚಾರ …

ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ಮಾಜಿ ಸಿಎಂ Read More »

ಅತಿ ಶೀಘ್ರದಲ್ಲಿ ಯರಗೋಳ್ ಯೋಜನೆ ಪೂರ್ಣ ಹೆಚ್.ಡಿ.ಕುಮಾರಸ್ವಾಮಿ

ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್‌ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್‌ ಜಲಾಶಯದಲ್ಲಿ ಕಳಸಕ್ಕೆ ನೀರು ಸಂಗ್ರಹ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಯರಗೋಳ್‌ ಬಹಳ ಉಪಯುಕ್ತವಾದ ಯೋಜನೆ. ಹಲವಾರು ವರ್ಷಗಳಿಂದ ಈ ಭಾಗದ …

ಅತಿ ಶೀಘ್ರದಲ್ಲಿ ಯರಗೋಳ್ ಯೋಜನೆ ಪೂರ್ಣ ಹೆಚ್.ಡಿ.ಕುಮಾರಸ್ವಾಮಿ Read More »

ಯುವ ಉದ್ಯಮಿ ಮತ್ತು ಡೆವಲಪರ್ ಪ್ರಣವ್ ಶರ್ಮಾ

ಕೋಲಾರ್ : ಕೋಲಾರ್/ಬೆಂಗಳೂರಿನ ಯುವ ಉದ್ಯಮಿ ಮತ್ತು ಡೆವಲಪರ್ ಪ್ರಣವ್ ಶರ್ಮಾ ಅವರು ಈ ವರ್ಷದ ಆರಂಭದಲ್ಲಿ ಯುವ ಉದ್ಯಮಿಗಳ ಫೋರ್ಬ್ಸ್ 30 ಅಂಡರ್ 30 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಮತ್ತು ಮಧ್ಯಮ ವರ್ಗದ ಮನೆ ಖರೀದಿದಾರರಿಗೆ ಕೈಗೆಟಕುವ ದರದಲ್ಲಿ ವಸತಿ ಒದಗಿಸುವ ಅವರ ಯಶಸ್ವಿ ಉದ್ಯಮಕ್ಕೆ ಮನ್ನಣೆ ದೊರೆತಿದ್ದು ಯೋಜನೆಯ ವೆಚ್ಚದ ಅನುಪಾತವನ್ನು ಧನಾತ್ಮಕವಾಗಿ ಕಡಿಮೆ ಮಾಡಲು ಸೌರಶಕ್ತಿ ವಿಭಾಗವನ್ನು ಆಯ್ದುಕೊಂಡ ಅನನ್ಯ ಮಾದರಿಗೆ ಈ ಗೌರವ ನೀಡಲಾಗಿದೆ. ಸೌರಶಕ್ತಿ ಉತ್ಪಾದನೆಗೆ ಸಂಬಂಧಿಸಿದ ಯೋಜನೆಯಲ್ಲಿ, …

ಯುವ ಉದ್ಯಮಿ ಮತ್ತು ಡೆವಲಪರ್ ಪ್ರಣವ್ ಶರ್ಮಾ Read More »

Translate »
Scroll to Top