ಶೀಘ್ರ ಬೆಳೆ ಸಮೀಕ್ಷೆ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಚಿತ್ರದುರ್ಗ: ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಸಂಪೂರ್ಣ ಮಾಹಿತಿಯನ್ನು “ಫ್ರೂಟ್ಸ್ ತಂತ್ರಾಂಶ”ದಲ್ಲಿ ನಮೂದಿಸಿದರೆ ಮಾತ್ರ ರೈತರಿಗೆ ಬೆಳೆ ನಷ್ಟ ತುಂಬಿಕೊಡಲು ಸಾಧ್ಯ. ಆ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರದಲ್ಲಿ ಬೆಳೆ ಸಮೀಕ್ಷೆ ನಡೆಸಿದ ಅಂಕಿಅಂಶಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.