ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಡಿ.ಕೆ. ಶಿವಕುಮಾರ್
ಮೈಸೂರು,ಜ,3 : ಯಾವುದೇ ಶುಭ ಕಾರ್ಯಕ್ರಮ ಮಾಡುವ ಮುನ್ನ ದೇವಿಯ ಪ್ರಾರ್ಥನೆ ಮಾಡುವುದು ಸಂಪ್ರದಾಯ. ಎಲ್ಲ ಅಡಚಣೆಗಳನ್ನು ಸಂಹಾರ ಮಾಡುವ ಶಕ್ತಿ ಈ ದೇವಿಗೆ ಇದೆ. ತಾಯಿ ಚಾಮುಂಡೇಶ್ವರಿಯನ್ನು ನಂಬಿರುವವರು ನಾವು. ನಾನು ರಾಜ್ಯದ ಹಿತ, ಕುಡಿಯುವ ನೀರು, ಕಾವೇರಿ ಜಲಾನಯನ ಪ್ರದೇಶದ ರೈತರಿಗಾಗಿ ನಾವು ಮೇಕೆದಾಟು ಹೋರಾಟ ಮಾಡುತ್ತಿದ್ದೇವೆ. ಚಾಮರಾಜನಗರ ನಗರ ಕೂಡ ಮೈಸೂರು ಜಿಲ್ಲೆ ಭಾಗ. ಮತ್ತೊಂದು ರಾಮನಗರ ಬೆಂಗಳೂರಿನ ಒಂದು ಭಾಗ. ಮೇಕೆದಾಟು ಒಂದು ದಡ ಮೈಸೂರು ಜಿಲ್ಲೆಯಾದರೆ, ಮತ್ತೊಂದು ದಡ ಬೆಂಗಳೂರಿಗೆ …