ರಾಯಚೂರು

ರಾಯಚೂರಿನ ಯರಮರಸ್‌ನಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಅನುದಾನ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ರಾಯಚೂರು ನಗರದಲ್ಲಿನ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಯೋಜಿಸಲಾಗಿರುವ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವ ಭರವಸೆಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ನೀಡಿದರು.

ನೀಟ್ ಪರೀಕ್ಷೆ  ಅಕ್ರಮ ಬಹುದೊಡ್ಡ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್

ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಸಿಂಧನೂರಿನಲ್ಲಿ ಬಿಜೆಪಿ ಪ್ರತಿಭಟನೆ  

ಸಿಂಧನೂರು : ಡೀಸೆಲ್ ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಪ್ರತಿಭಟನೆ ಮೆರವಣಿಗೆ ಸೋಮವಾರ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಬಿಜೆಪಿ ಪಕ್ಷದ ಪ್ರಮುಖ ಮುಖಂಡರು ಮೆರವಣಿಗೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಹೋಗಿದರು ಈ ವೇಳೆ ಬಿಜೆಪಿ ಮುಖಂಡ ಕೆ. ಕರಿಯಪ್ಪ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಒಂದು ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಎಲ್ಲಾ ಸಮುದಾಯದವರಿಗೆ ಒಂದಲ್ಲ ಒಂದು ಸಮಸ್ಯೆ ಆಗುತ್ತಿದೆ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿ ಮತ್ತಷ್ಟು ಜನರಿಗೆ ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದೆ ಎಂದರು.

ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್

ರಾಯಚೂರು: ಜೈ ಶ್ರೀರಾಮ್ ಎಂದು ಹೇಳಿದವರನ್ನು ಪೊಲೀಸರು ಬೂಟಿಗಾಲಲ್ಲಿ ಒದೆಯಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕನೊಬ್ಬ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ.

ಗುಂಪುಗಳ ಮಧ್ಯೆ ಮಾರಾ ಮಾರಿ ನಾಲ್ವರಿಗೆ ಗಂಭೀರ ಗಾಯ

ರಾಯಚೂರು : ನ್ಯಾಯ ಪಂಚಾಯತಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯ ಘರ್ಷಣೆ ಉಂಟಾಗಿ ಕಬ್ಬಿಣದ ರಾಡ್ ಹಾಗೂ ಕಟ್ಟಿಗೆಗಳಿಂದ ಹೊಡೆದಾಡಿಕೊಂಡಿದ್ದು, ಮಾರಣಾಂತಿಕ ಹಲ್ಲೆಯಿಂದಾಗಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರ ವಲಯದ ಅಸ್ಕಿಹಾಳ ಗ್ರಾಮದಲ್ಲಿ ನಡೆದಿದೆ.

ನಿಂತ ಬೆಳೆಗಳಿಗೆ, ಕುಡಿಯುವ ನೀರು ಕಾಯ್ದಿರಿಸಲು ಕಾಲುವೆಗೆ ನೀರು: ಸಚಿವರಾದ ಶಿವರಾಜ್ ತಂಗಡಗಿ

ಹೊಸಪೇಟೆ (ವಿಜಯನಗರ): ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಯೋಜನೆಯ 121ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

ರಾಯಚೂರಿನ ವಿಜ್ಞಾನ ಕೇಂದ್ರವನ್ನ ಕೆಟಗರಿ – 2 ವಿಜ್ಞಾನ ಕೇಂದ್ರವಾಗಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು, 22.25 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೆಟಗರಿ – 2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಬರ ಪರಿಹಾರ ಹಣ ದುರ್ಬಳಕೆ ತಡೆಯುವ ಸಲುವಾಗಿ ‘ಫ್ರೂಟ್ಸ್’ ತಂತ್ರಾಂಶ ಅಭಿವೃದ್ಧಿ : ಕೃಷ್ಣ ಬೈರೇಗೌಡ

ರಾಯಚೂರು : ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ, ಶೋಷಿತರ ಪರ ಸದಾ ನಿಲ್ಲುತ್ತೇನೆ – ಸಿಎಂ

ದೇವದುರ್ಗ : ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ವ್ಯಂಗ್ಯ

ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ: ಸಿ.ಎಂ.ಸಿದ್ದರಾಮಯ್ಯ ಸಿಂಧನೂರು : ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.   ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಜಲ ಜೀವನ್ ಮಿಷನ್ (DBOT) ಯೋಜನೆಯ ಶಂಕುಸ್ಥಾಪನೆ ನೆರವೇರಿಸುವ ಜತೆಗೆ ಸಿಂಧನೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.  ನಾವು ಐದೂ ಗ್ಯಾರಂಟಿಗಳನ್ನು …

ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ: ಸಿಎಂ ವ್ಯಂಗ್ಯ Read More »

Translate »
Scroll to Top